Advertisement
ಸುದ್ದಿಗಳು

ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆ

Share

ಮಂಗಳೂರು: ದಿವಂಗತ ವಾರಣಾಶಿ ಸುಬ್ರಾಯ ಭಟ್ಟರು ನೇತೃತ್ವದಲ್ಲಿ, ಕೃಷಿಕ ಸಮುದಾಯದ ಉದ್ಧಾರಕ್ಕಾಗಿ 1973 ಜುಲೈ 11ರಂದು ರೂಪುಗೊಂಡ ಕ್ಯಾಂಪ್ಕೊ ಸಂಸ್ಥೆಯು, ಕಳೆದ 47 ವರ್ಷಗಳಲ್ಲಿ ತನ್ನ ಸದಸ್ಯ ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಸ್ಥಿರ ಬೆಲೆಯೊಂದಿಗೆ ಸೂಕ್ತ ಮಾರುಕಟ್ಟೆಯನ್ನೊದಗಿಸುವುದರೊಂದಿಗೆ ಇನ್ನಿತರ ರೀತಿಯಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬಂದಿದೆ. ಇಂದು ಸಂಸ್ಥೆಯು ಹೆಮ್ಮರವಾಗಿ ಬೆಳೆದು, 1850 ಕೋಟಿ ರೂಪಾಯಿಗಳ ಬೃಹತ್ ವಹಿವಾಟನ್ನು ದಾಖಲಿಸಿದೆಯೆಂದರೆ ಇದು ಸುಬ್ರಾಯ ಭಟ್ಟರ ದೂರದರ್ಶಿ ನಿರ್ಧಾರಗಳ ಫಲವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.

ಅವರು  ಶನಿವಾರದಂದು ಮಂಗಳೂರಿನ ಕ್ಯಾಂಪ್ಕೊ ಮುಖ್ಯಕಚೇರಿಯಲ್ಲಿ ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಸಂಸ್ಥೆಯ ಹಿರಿಯ ನಿರ್ದೇಶಕರು ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಭಟ್ ಅವರು ಸಂಸ್ಥೆಯ ಹುಟ್ಟು, ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿ, ವಾರಣಾಶಿಯವರು ಹಾಕಿಕೊಟ್ಟ ಭದ್ರ ಬುನಾದಿ, ತೋರಿದ ಹಾದಿಯಲ್ಲಿ ಸಾಗಿದ ಸಂಸ್ಥೆಯ ಸಾಧನೆಗಳು ಅಪಾರ. ಮುಂದಿನ ದಿನಗಳಲ್ಲಿ ಸಂಸ್ಥೆಯು ಸಾಧಿಸುವುದು ಬಹಳಷ್ಟಿದೆ ಎಂದರು.

ಸಂಸ್ಥೆಯ ನಿರ್ದೇಶಕರುಗಳಾದ  ಕಿಶೋರ್ ಕುಮಾರ್ ಕೊಡ್ಗಿ,  ಕೃಷ್ಣ ಪ್ರಸಾದ್ ಮಡ್ತಿಲ ಮಾತನಾಡಿದರು. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ  ರೇಷ್ಮಾ ಮಲ್ಯ ಉಪಸ್ಥಿತರಿದ್ದರು.

ಪುತ್ತೂರು ಕ್ಯಾಂಪ್ಕೊ ಚಾಕೊಲೇಟ್ ಕಾರ್ಖಾನೆ ಮತ್ತು ದೇಶಾದ್ಯಂತವಿರುವ ಕ್ಯಾಂಪ್ಕೊ ಶಾಖೆಗಳಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

22 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago