ಮಂಗಳೂರು: ದಿವಂಗತ ವಾರಣಾಶಿ ಸುಬ್ರಾಯ ಭಟ್ಟರು ನೇತೃತ್ವದಲ್ಲಿ, ಕೃಷಿಕ ಸಮುದಾಯದ ಉದ್ಧಾರಕ್ಕಾಗಿ 1973 ಜುಲೈ 11ರಂದು ರೂಪುಗೊಂಡ ಕ್ಯಾಂಪ್ಕೊ ಸಂಸ್ಥೆಯು, ಕಳೆದ 47 ವರ್ಷಗಳಲ್ಲಿ ತನ್ನ ಸದಸ್ಯ ಬೆಳೆಗಾರರಿಗೆ ತಮ್ಮ ಉತ್ಪನ್ನಗಳಿಗೆ ಸ್ಥಿರ ಬೆಲೆಯೊಂದಿಗೆ ಸೂಕ್ತ ಮಾರುಕಟ್ಟೆಯನ್ನೊದಗಿಸುವುದರೊಂದಿಗೆ ಇನ್ನಿತರ ರೀತಿಯಲ್ಲಿ ನಿರಂತರ ಸೇವೆಯನ್ನು ನೀಡುತ್ತಾ ಬಂದಿದೆ. ಇಂದು ಸಂಸ್ಥೆಯು ಹೆಮ್ಮರವಾಗಿ ಬೆಳೆದು, 1850 ಕೋಟಿ ರೂಪಾಯಿಗಳ ಬೃಹತ್ ವಹಿವಾಟನ್ನು ದಾಖಲಿಸಿದೆಯೆಂದರೆ ಇದು ಸುಬ್ರಾಯ ಭಟ್ಟರ ದೂರದರ್ಶಿ ನಿರ್ಧಾರಗಳ ಫಲವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.
ಅವರು ಶನಿವಾರದಂದು ಮಂಗಳೂರಿನ ಕ್ಯಾಂಪ್ಕೊ ಮುಖ್ಯಕಚೇರಿಯಲ್ಲಿ ಕ್ಯಾಂಪ್ಕೊ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡುತ್ತಿದ್ದರು. ಸಂಸ್ಥೆಯ ಹಿರಿಯ ನಿರ್ದೇಶಕರು ಮತ್ತು ಮಾಜಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎ.ಎಸ್.ಭಟ್ ಅವರು ಸಂಸ್ಥೆಯ ಹುಟ್ಟು, ಬೆಳೆದು ಬಂದ ಹಾದಿಯ ಬಗ್ಗೆ ಮಾತನಾಡಿ, ವಾರಣಾಶಿಯವರು ಹಾಕಿಕೊಟ್ಟ ಭದ್ರ ಬುನಾದಿ, ತೋರಿದ ಹಾದಿಯಲ್ಲಿ ಸಾಗಿದ ಸಂಸ್ಥೆಯ ಸಾಧನೆಗಳು ಅಪಾರ. ಮುಂದಿನ ದಿನಗಳಲ್ಲಿ ಸಂಸ್ಥೆಯು ಸಾಧಿಸುವುದು ಬಹಳಷ್ಟಿದೆ ಎಂದರು.
ಸಂಸ್ಥೆಯ ನಿರ್ದೇಶಕರುಗಳಾದ ಕಿಶೋರ್ ಕುಮಾರ್ ಕೊಡ್ಗಿ, ಕೃಷ್ಣ ಪ್ರಸಾದ್ ಮಡ್ತಿಲ ಮಾತನಾಡಿದರು. ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ರೇಷ್ಮಾ ಮಲ್ಯ ಉಪಸ್ಥಿತರಿದ್ದರು.
ಪುತ್ತೂರು ಕ್ಯಾಂಪ್ಕೊ ಚಾಕೊಲೇಟ್ ಕಾರ್ಖಾನೆ ಮತ್ತು ದೇಶಾದ್ಯಂತವಿರುವ ಕ್ಯಾಂಪ್ಕೊ ಶಾಖೆಗಳಲ್ಲಿ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…