Advertisement
ಕೃಷಿ

ಕ್ಯಾಂಪ್ಕೊ ಸದಸ್ಯರಿಗೆ ವೈದ್ಯಕೀಯ ವೆಚ್ಚ ಭರಿಸಲು 1ಲಕ್ಷ ರೂ. ನೆರವು

Share

ಮಂಗಳೂರು: ‘ಕ್ಯಾಂಪ್ಕೊ ಚಿತ್ತ ಸದಸ್ಯರ ಆರೋಗ್ಯದತ್ತ’  ಧ್ಯೇಯವಾಕ್ಯದಂತೆ ಸಂಸ್ಥೆ ತನ್ನ ಸದಸ್ಯರ ಆರೋಗ್ಯದತ್ತ ಕಾಳಜಿ ವಹಿಸುತ್ತಿದೆ. ಸದ್ಯ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಡಯಾಲಿಸಿಸ್, ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿಟ್ರಾನ್ಸ್ ಪ್ಲಾಂಟೇಶನ್ ಮತ್ತು ಸಕ್ರಿಯ ಸದಸ್ಯರ ಹಾಗೂ ಅವರ ಕಾರ್ಯನಿರತ ಕಾರ್ಮಿಕರ ಅಪಘಾತ ಮರಣದಲ್ಲಿ ಆರ್ಥಿಕ ಪರಿಹಾರ ಒಳಗೊಂಡಿರುತ್ತದೆ. ನಿಯಮಾನುಸಾರ ಡಯಾಲಿಸಿಸ್ ಗೆ ರೂ.10,000, ಹೃದಯಚಿಕಿತ್ಸೆಗೆ ರೂ.50,000, ಕಿಡ್ನಿ ಅಳವಡಿಸಲು ರೂ.1 ಲಕ್ಷ ಹಾಗೂ ಆಕಸ್ಮಿಕವಾಗಿ ಮರಣ ಸಂಭವಿಸಿದಲ್ಲಿ ಆರ್ಥಿಕ ಪರಿಹಾರವಾಗಿ ರೂ.50,000ನೀಡಲಾಗುತ್ತದೆ.

ಬದಿಯಡ್ಕ ಶಾಖಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕ್ಯಾಂಪ್ಕೊ ಸದಸ್ಯ ಎ.ಅಬ್ದುಲ್‍ಖಾದರ್‍ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ಇತ್ತೀಚೆಗೆ ಕಿಡ್ನಿ ಅಳವಡಿಸಿಕೊಳ್ಳುವ ಶಸ್ತ್ರಚಿಕಿತ್ಸೆಯನ್ನು ಹೊಂದಿದ್ದರು. ಕ್ಯಾಂಪ್ಕೊ, ಸದಸ್ಯರ ಈ ವೈದ್ಯಕೀಯ ವೆಚ್ಚಕ್ಕಾಗಿ ರೂ.1 ಲಕ್ಷವನ್ನು ನೀಡಿದೆ.  ಕ್ಯಾಂಪ್ಕೊ ಬದಿಯಡ್ಕ ಶಾಖೆಯಲ್ಲಿ ಸಂಸ್ಥೆಯ ಅಧ್ಯಕ್ಷ  ಎಸ್.ಆರ್.ಸತೀಶ್ಚಂದ್ರ ಫಲಾನುಭವಿಯ ಸಹೋದರ  ನಿಜಾಮುದ್ದೀನ್‍ ಅವರಿಗೆ ಧನಸಹಾಯದ ರೂ.1 ಲಕ್ಷದ ಚೆಕ್ಕನ್ನು ನೀಡಿ  ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ  ಶಂಕರನಾರಾಯಣ ಭಟ್‍ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ  ಸುರೇಶ್ ಭಂಡಾರಿ, ಕ್ಯಾಂಪ್ಕೊ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

6 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

13 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

13 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

21 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

1 day ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

2 days ago