ಕೃಷಿ

ಕ್ಯಾಂಪ್ಕೊ ಸದಸ್ಯರಿಗೆ ವೈದ್ಯಕೀಯ ವೆಚ್ಚ ಭರಿಸಲು 1ಲಕ್ಷ ರೂ. ನೆರವು

Share

ಮಂಗಳೂರು: ‘ಕ್ಯಾಂಪ್ಕೊ ಚಿತ್ತ ಸದಸ್ಯರ ಆರೋಗ್ಯದತ್ತ’  ಧ್ಯೇಯವಾಕ್ಯದಂತೆ ಸಂಸ್ಥೆ ತನ್ನ ಸದಸ್ಯರ ಆರೋಗ್ಯದತ್ತ ಕಾಳಜಿ ವಹಿಸುತ್ತಿದೆ. ಸದ್ಯ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಡಯಾಲಿಸಿಸ್, ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿಟ್ರಾನ್ಸ್ ಪ್ಲಾಂಟೇಶನ್ ಮತ್ತು ಸಕ್ರಿಯ ಸದಸ್ಯರ ಹಾಗೂ ಅವರ ಕಾರ್ಯನಿರತ ಕಾರ್ಮಿಕರ ಅಪಘಾತ ಮರಣದಲ್ಲಿ ಆರ್ಥಿಕ ಪರಿಹಾರ ಒಳಗೊಂಡಿರುತ್ತದೆ. ನಿಯಮಾನುಸಾರ ಡಯಾಲಿಸಿಸ್ ಗೆ ರೂ.10,000, ಹೃದಯಚಿಕಿತ್ಸೆಗೆ ರೂ.50,000, ಕಿಡ್ನಿ ಅಳವಡಿಸಲು ರೂ.1 ಲಕ್ಷ ಹಾಗೂ ಆಕಸ್ಮಿಕವಾಗಿ ಮರಣ ಸಂಭವಿಸಿದಲ್ಲಿ ಆರ್ಥಿಕ ಪರಿಹಾರವಾಗಿ ರೂ.50,000ನೀಡಲಾಗುತ್ತದೆ.

ಬದಿಯಡ್ಕ ಶಾಖಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕ್ಯಾಂಪ್ಕೊ ಸದಸ್ಯ ಎ.ಅಬ್ದುಲ್‍ಖಾದರ್‍ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ಇತ್ತೀಚೆಗೆ ಕಿಡ್ನಿ ಅಳವಡಿಸಿಕೊಳ್ಳುವ ಶಸ್ತ್ರಚಿಕಿತ್ಸೆಯನ್ನು ಹೊಂದಿದ್ದರು. ಕ್ಯಾಂಪ್ಕೊ, ಸದಸ್ಯರ ಈ ವೈದ್ಯಕೀಯ ವೆಚ್ಚಕ್ಕಾಗಿ ರೂ.1 ಲಕ್ಷವನ್ನು ನೀಡಿದೆ.  ಕ್ಯಾಂಪ್ಕೊ ಬದಿಯಡ್ಕ ಶಾಖೆಯಲ್ಲಿ ಸಂಸ್ಥೆಯ ಅಧ್ಯಕ್ಷ  ಎಸ್.ಆರ್.ಸತೀಶ್ಚಂದ್ರ ಫಲಾನುಭವಿಯ ಸಹೋದರ  ನಿಜಾಮುದ್ದೀನ್‍ ಅವರಿಗೆ ಧನಸಹಾಯದ ರೂ.1 ಲಕ್ಷದ ಚೆಕ್ಕನ್ನು ನೀಡಿ  ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ  ಶಂಕರನಾರಾಯಣ ಭಟ್‍ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ  ಸುರೇಶ್ ಭಂಡಾರಿ, ಕ್ಯಾಂಪ್ಕೊ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

59 minutes ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

3 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

5 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

5 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

5 hours ago

ಎಫ್‌ಪಿಒ ಗಳಿಗೆ ರಾಜ್ಯ ಸರ್ಕಾರದಿಂದ ನೆರವು

ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…

5 hours ago