ಮಂಗಳೂರು: ‘ಕ್ಯಾಂಪ್ಕೊ ಚಿತ್ತ ಸದಸ್ಯರ ಆರೋಗ್ಯದತ್ತ’ ಧ್ಯೇಯವಾಕ್ಯದಂತೆ ಸಂಸ್ಥೆ ತನ್ನ ಸದಸ್ಯರ ಆರೋಗ್ಯದತ್ತ ಕಾಳಜಿ ವಹಿಸುತ್ತಿದೆ. ಸದ್ಯ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಡಯಾಲಿಸಿಸ್, ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿಟ್ರಾನ್ಸ್ ಪ್ಲಾಂಟೇಶನ್ ಮತ್ತು ಸಕ್ರಿಯ ಸದಸ್ಯರ ಹಾಗೂ ಅವರ ಕಾರ್ಯನಿರತ ಕಾರ್ಮಿಕರ ಅಪಘಾತ ಮರಣದಲ್ಲಿ ಆರ್ಥಿಕ ಪರಿಹಾರ ಒಳಗೊಂಡಿರುತ್ತದೆ. ನಿಯಮಾನುಸಾರ ಡಯಾಲಿಸಿಸ್ ಗೆ ರೂ.10,000, ಹೃದಯಚಿಕಿತ್ಸೆಗೆ ರೂ.50,000, ಕಿಡ್ನಿ ಅಳವಡಿಸಲು ರೂ.1 ಲಕ್ಷ ಹಾಗೂ ಆಕಸ್ಮಿಕವಾಗಿ ಮರಣ ಸಂಭವಿಸಿದಲ್ಲಿ ಆರ್ಥಿಕ ಪರಿಹಾರವಾಗಿ ರೂ.50,000ನೀಡಲಾಗುತ್ತದೆ.
ಬದಿಯಡ್ಕ ಶಾಖಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕ್ಯಾಂಪ್ಕೊ ಸದಸ್ಯ ಎ.ಅಬ್ದುಲ್ಖಾದರ್ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ಇತ್ತೀಚೆಗೆ ಕಿಡ್ನಿ ಅಳವಡಿಸಿಕೊಳ್ಳುವ ಶಸ್ತ್ರಚಿಕಿತ್ಸೆಯನ್ನು ಹೊಂದಿದ್ದರು. ಕ್ಯಾಂಪ್ಕೊ, ಸದಸ್ಯರ ಈ ವೈದ್ಯಕೀಯ ವೆಚ್ಚಕ್ಕಾಗಿ ರೂ.1 ಲಕ್ಷವನ್ನು ನೀಡಿದೆ. ಕ್ಯಾಂಪ್ಕೊ ಬದಿಯಡ್ಕ ಶಾಖೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಫಲಾನುಭವಿಯ ಸಹೋದರ ನಿಜಾಮುದ್ದೀನ್ ಅವರಿಗೆ ಧನಸಹಾಯದ ರೂ.1 ಲಕ್ಷದ ಚೆಕ್ಕನ್ನು ನೀಡಿ ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ, ಕ್ಯಾಂಪ್ಕೊ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…