ಮಂಗಳೂರು: ‘ಕ್ಯಾಂಪ್ಕೊ ಚಿತ್ತ ಸದಸ್ಯರ ಆರೋಗ್ಯದತ್ತ’ ಧ್ಯೇಯವಾಕ್ಯದಂತೆ ಸಂಸ್ಥೆ ತನ್ನ ಸದಸ್ಯರ ಆರೋಗ್ಯದತ್ತ ಕಾಳಜಿ ವಹಿಸುತ್ತಿದೆ. ಸದ್ಯ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಡಯಾಲಿಸಿಸ್, ತೆರೆದ ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿಟ್ರಾನ್ಸ್ ಪ್ಲಾಂಟೇಶನ್ ಮತ್ತು ಸಕ್ರಿಯ ಸದಸ್ಯರ ಹಾಗೂ ಅವರ ಕಾರ್ಯನಿರತ ಕಾರ್ಮಿಕರ ಅಪಘಾತ ಮರಣದಲ್ಲಿ ಆರ್ಥಿಕ ಪರಿಹಾರ ಒಳಗೊಂಡಿರುತ್ತದೆ. ನಿಯಮಾನುಸಾರ ಡಯಾಲಿಸಿಸ್ ಗೆ ರೂ.10,000, ಹೃದಯಚಿಕಿತ್ಸೆಗೆ ರೂ.50,000, ಕಿಡ್ನಿ ಅಳವಡಿಸಲು ರೂ.1 ಲಕ್ಷ ಹಾಗೂ ಆಕಸ್ಮಿಕವಾಗಿ ಮರಣ ಸಂಭವಿಸಿದಲ್ಲಿ ಆರ್ಥಿಕ ಪರಿಹಾರವಾಗಿ ರೂ.50,000ನೀಡಲಾಗುತ್ತದೆ.
ಬದಿಯಡ್ಕ ಶಾಖಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಕ್ಯಾಂಪ್ಕೊ ಸದಸ್ಯ ಎ.ಅಬ್ದುಲ್ಖಾದರ್ ಅವರು ಕಿಡ್ನಿ ವೈಫಲ್ಯಕ್ಕೆ ಒಳಗಾಗಿದ್ದು ಇತ್ತೀಚೆಗೆ ಕಿಡ್ನಿ ಅಳವಡಿಸಿಕೊಳ್ಳುವ ಶಸ್ತ್ರಚಿಕಿತ್ಸೆಯನ್ನು ಹೊಂದಿದ್ದರು. ಕ್ಯಾಂಪ್ಕೊ, ಸದಸ್ಯರ ಈ ವೈದ್ಯಕೀಯ ವೆಚ್ಚಕ್ಕಾಗಿ ರೂ.1 ಲಕ್ಷವನ್ನು ನೀಡಿದೆ. ಕ್ಯಾಂಪ್ಕೊ ಬದಿಯಡ್ಕ ಶಾಖೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಫಲಾನುಭವಿಯ ಸಹೋದರ ನಿಜಾಮುದ್ದೀನ್ ಅವರಿಗೆ ಧನಸಹಾಯದ ರೂ.1 ಲಕ್ಷದ ಚೆಕ್ಕನ್ನು ನೀಡಿ ಶೀಘ್ರ ಗುಣಮುಖರಾಗಿ ಆರೋಗ್ಯವಂತರಾಗುವಂತೆ ಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ಖಂಡಿಗೆ, ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ, ಕ್ಯಾಂಪ್ಕೊ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…