Advertisement
ಸುದ್ದಿಗಳು

ಕ್ಯಾಂಪ್ಕೋದಿಂದ ಅಡಿಕೆ ಬೆಳೆಗಾರರ ಡಿಜಿಟಲ್ ಮೀಟಿಂಗ್ | ಅಡಿಕೆ ಬೆಲೆ ಕುಸಿತವಾಗದು – ಧೈರ್ಯ ತುಂಬಿದ ಕ್ಯಾಂಪ್ಕೋ ಅಧ್ಯಕ್ಷರು |

Share

ಮಂಗಳೂರು: ಯಾವುದೇ ಕಾರಣಕ್ಕೂ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಬೇಕಾದ ಅವಶ್ಯಕತೆ ಇಲ್ಲ. ಅಡಿಕೆ ಧಾರಣೆ ಕುಸಿಯುವುದಿಲ್ಲ. ಉತ್ತರ ಭಾರತದಲ್ಲಿ ಅಡಿಕೆಗೆ ಬೇಡಿಕೆ ಇದೆ. ಲಾಕ್ಡೌನ್ ಮುಗಿದ ಬಳಿಕ ಕೆಲವೇ ದಿನಗಳಲ್ಲಿ  ಮಾರುಕಟ್ಟೆ ಸಹಜ ಸ್ಥಿತಿಗೆ ಬರಲಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ಹೇಳಿದರು.

ಅವರು ಗುರುವಾರ ಕ್ಯಾಂಪ್ಕೋದಿಂದ ಆನ್ ಲೈನ್ ಮೂಲಕ ನಡೆದ ಬೆಳೆಗಾರರ ಸಭೆಯಲ್ಲಿ  ಮಾತನಾಡಿದರು. ಅಡಿಕೆಗೆ ಬೇಡಿಕೆ ಇದ್ದರೂ ಅದರ ನಂತರ ಪ್ರೊಸೆಸಿಂಗ್ ಈಗ ಸಾಧ್ಯವಾಗುತ್ತಿಲ್ಲ. ಉತ್ತರ ಭಾರತದಿಂದ ಸಾಕಷ್ಟು ಬೇಡಿಕೆ ಇದೆ. ಆದರೆ ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆ ಕುಸಿತವಾಗದು, ಈಗಾಗಲೇ ಶೇ.30 ರಷ್ಟು ಕಡಿಮೆ ದಾಸ್ತಾನು ಇದೆ. ಉತ್ತರ ಭಾರತದಲ್ಲೂ ಸಾಕಷ್ಟು ಅಡಿಕೆ ಕೊರತೆ ಇದೆ.  ಅಡಿಕೆ ಬೆಳೆಗಾರರು ಯಾವುದೇ ಕಾರಣಕ್ಕೂ ಆತಂಕಪಡಬೇಕಾದ ಅವಶ್ಯಕತೆ ಇಲ್ಲ ಎಂದರು.

ಅಡಿಕೆ ಬೆಳೆಗಾರರ ರಕ್ಷಣೆಗೆ ಸಹಕಾರಿ ಸಂಘಗಳು, ಸರಕಾರ ಹಾಗೂ ಇತರ ಎಲ್ಲಾ ಸಂಘಸಂಸ್ಥೆಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು  ಎಲ್ಲಾ ರೀತಿಯ ಪ್ರಯತ್ನ ಮಾಡಲಾಗಿದೆ. ಕ್ಯಾಂಪ್ಕೋ ಸದಾ ಅಡಿಕೆ ಬೆಳೆಗಾರರ ಪರವಾಗಿ ನಿಲ್ಲಲಿದೆ. ಈ ನಡುವೆ ಕ್ಯಾಂಪ್ಕೋದಲ್ಲಿ  ಠೇವಣಿ ಇಡಲೂ ಅನೇಕರು ಮುಂದೆ ಬಂದಿರುವುದು  ಕೂಡಾ ಆಶಾದಾಯಕ ಬೆಳವಣಿಗೆ ಎಂದರು. ಇದರ ಜೊತೆಗೆ ಮಳೆಗಾಲ ಮೊದಲು ಮೈಲುತುತ್ತು ಸರಬರಾಜಿಗೂ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಅನೇಕ ಬೆಳೆಗಾರರಿಂದ ಗ್ರಾಮೀಣ ಭಾಗಗಳಲ್ಲೂ ಅಡಿಕೆ ಖರೀದಿ ನಡೆಸುವ ಬಗ್ಗೆ ಬೇಡಿಕೆ ವ್ಯಕ್ತವಾಗಿತ್ತು, ಇದಕ್ಕೆ ಉತ್ತರಿಸಿದ ಅಧ್ಯಕ್ಷರು, ಮುಂದಿನ ದಿನಗಳಲ್ಲಿ  ಖರೀದಿ ನಡೆಸಲಾಗುವುದು. ಈಗಾಗಲೇ ಪಂಜ ಸಹಕಾರಿ ಸಂಘ ಸೇರಿದಂತೆ ಕೆಲವು ಸಹಕಾರಿ ಸಂಘಗಳು ಕ್ಯಾಂಪ್ಕೋ ಜೊತೆ ಕೈಜೋಡಿಸಲು ಮುಂದೆ ಬಂದಿದೆ. ಹೀಗಾಗಿ ಸಹಕಾರಿ ಸಂಘಗಳ ಸಹಕಾರದಿಂದ ಅಡಿಕೆ ಖರೀದಿ ನಡೆಸಬಹುದು ಎಂದರು.

ಇದರ ಜೊತೆಗೆ ಕ್ಯಾಂಪ್ಕೋ ಬೆಳೆಗಾರರರ ಜೊತೆ ನಿಕಟ ಸಂಬಂಧ ಇರಿಸಿಕೊಳ್ಳಲು ವ್ಯಾಟ್ಸಪ್ ಗುಂಪು ರಚನೆ, ಡಿಜಿಟಲ್ ಯುಗದಲ್ಲಿ ಇನ್ನಷ್ಟು ಹತ್ತಿರವಾಗುವುದು ಮೊದಲಾದ ಸಲಹೆಗಳಿಗೆ ಅಧ್ಯಕ್ಷರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಸಭೆಯಲ್ಲಿ  ಕ್ಯಾಂಪ್ಕೋ ಉಪಾಧ್ಯಕ್ಷ ಶಂ ನಾ ಖಂಡಿಗೆ, ಆಡಳಿತ ನಿರ್ದೇಶಕ ಸುರೇಶ್ ಭಂಡಾರಿ , ನಿರ್ದೇಶಕ ಪದ್ಮರಾಜ ಪಟ್ಟಾಜೆ ಇದ್ದರು. ಸಾಕಷ್ಟು ಬೆಳೆಗಾರರು ತಮ್ಮ ಪ್ರಶ್ನೆಗಳನ್ನು ಕೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

1 hour ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

2 hours ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

2 hours ago

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

8 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

9 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

9 hours ago