Advertisement
ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

Advertisement

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

15 hours ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

22 hours ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

22 hours ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

22 hours ago

ದೇಹದ ನೀರಿನ ಕೊರತೆ ತಪ್ಪಿಸಲು ಈ ಹಣ್ಣುಗಳು ಸಹಕಾರಿ

ಬೇಸಗೆಯ ಸಮಯದಲ್ಲಿ ದೇಹದ ನೀರಿನ ಕೊರತೆ ತಪ್ಪಿಸಲು watermelon, melon, strawberry ಸೇರಿದಂತೆ…

22 hours ago

ಕೃಷಿಯಲ್ಲಿ ಮುಂದಿನ ಕ್ರಾಂತಿ AI ಮೂಲಕ | ರೈತರಿಗೆ ₹70,000 ಕೋಟಿ ಹೆಚ್ಚುವರಿ ಆದಾಯ ಸಾಧ್ಯ – ಕೇಂದ್ರ ಸಚಿವ ಜಿತೇಂದ್ರ ಸಿಂಗ್

ಭಾರತದ ಕೃಷಿಯಲ್ಲಿ ಮುಂದಿನ ದೊಡ್ಡ ಕ್ರಾಂತಿ ಕೃತಕ ಬುದ್ಧಿಮತ್ತೆ  (Artificial Intelligence) AI)ಮೂಲಕ…

22 hours ago