Advertisement
ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಹಾನಿಕಾರಕವಲ್ಲ – ಅಧ್ಯಯನ ಪ್ರಗತಿಯಲ್ಲಿ | ಹಾಳೆತಟ್ಟೆ ಹಾನಿಕಾರಕವಲ್ಲ

ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…

2 hours ago

ಗಿರಿಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ | ಮುಳ್ಳಯ್ಯನಗಿರಿ–ಸೀತಾಳಯ್ಯಗಿರಿಯಲ್ಲಿ ಜಾಗೃತಿ ಕಾರ್ಯ

ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…

3 hours ago

ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ | ಲೀಟರ್‌ಗೆ ₹2 ಹೆಚ್ಚಳ ಘೋಷಿಸಿದ ಕೋಮುಲ್

ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್‌ಗೆ ₹2 ಹೆಚ್ಚಳ ಮಾಡಲಾಗಿದೆ.…

3 hours ago

ಅಡಿಕೆ ರೋಗಕ್ಕೆ “100% ಬಯೋ ಗ್ಯಾರಂಟಿ” ಔಷಧಿ? — ICAR ಸ್ಪಷ್ಟನೆ | ಇನ್ನೂ ಅಧ್ಯಯನವೇ ಆಗಿಲ್ಲ…!

ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…

5 hours ago

ಹವಾಮಾನ ವರದಿ | 17-03-2026 | ಬೇಸಿಗೆಗೆ ಬ್ರೇಕ್ ಕೊಟ್ಟ ಮಳೆ..! ಮಾರ್ಚ್ ಅಂತ್ಯದವರೆಗೂ ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಅಲರ್ಟ್

ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

10 hours ago

ಅತಿಹೆಚ್ಚು ಮಳೆ ಬೀಳುವ ಬೆಟ್ಟಗಳು ಒಣಗುತ್ತಿವೆಯೇ? – ಮೇಘಾಲಯದ ನೀರಿನ ಸಂಕಷ್ಟದ ಎಚ್ಚರಿಕೆ

ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…

18 hours ago