ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

Advertisement

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

1 hour ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

2 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

2 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

12 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago