ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

Advertisement
Advertisement

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

3 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

5 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

11 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

20 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

21 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

21 hours ago