Advertisement
ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

18 minutes ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

38 minutes ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

5 days ago