Advertisement
ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

9 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

13 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

14 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

16 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

17 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago