Advertisement
ಮಾಹಿತಿ

ಕ್ಯಾಂಪ್ಕೋದಿಂದ ಅಡಿಕೆ ಸುಲಿಯುವ ಯಂತ್ರಕ್ಕೆ ಬಹುಮಾನ

Share

ಸುಳ್ಯ: ಚಾಲಿ ಅಡಿಕೆ ಕೃಷಿಕರಿಗೆ ಅಡಿಕೆ ಸುಲಿಸುವ ಕಾರ್ಯ ಸಲೀಸಾಗಿ ನಡೆಯುತ್ತಿಲ್ಲ. ಸಾಂಪ್ರದಾಯಿಕ ಶೈಲಿಯಲ್ಲಿಅಡಿಕೆ ಸುಲಿಯುವ ತಂಡಗಳಿದ್ದರೂ ಕೃಷಿಕರ ಅಗತ್ಯಕ್ಕೆ ಅವರು ಒದಗುತ್ತಿಲ್ಲ. ಈ ಸಮಸ್ಯೆಯನ್ನು ನಿವಾರಿಸಲು ಅಡಿಕೆ ಸುಲಿಯುವ ಅನೇಕ ಯಂತ್ರಗಳು ಈಗಾಗಲೆ ಬಂದಿದ್ದರೂ ನೂರಕ್ಕೆ ನೂರು ನಿಖರ ಕಾರ್ಯಕುಶಲತೆ ಹೊಂದಿದವು ಕಡಿಮೆ.

ಈ ನಿಟ್ಟಿನಲ್ಲಿ ಪ್ರಯೋಗಗಳು, ಆವಿಷ್ಕಾರಗಳು ಮತ್ತುಇನ್ನಷ್ಟು ಸಂಶೋಧನೆಗಳು ನಡೆಯುತ್ತಿರುವುದು ಸಮಾಧಾನಕರ. ಈ ಕಾರ್ಯವನ್ನು ಪ್ರೋತ್ಸಾಹಿಸಿ ಇನ್ನಷ್ಟು ಪೂರ್ಣ ಪ್ರಮಾಣದಲ್ಲಿಉತ್ತಮ ಗುಣಮಟ್ಟದ ಕೆಲಸ ನಿರ್ವಹಿಸಿಕೊಡುವ ಯಂತ್ರಗಳು ಬಂದು ಅಡಿಕೆ ಕೃಷಿಕರಿಗೆ ನೆರವಾಗಬೇಕೆನ್ನುವುದು ಕ್ಯಾಂಪ್ಕೋದ ಆಶಯ. ಅದಕ್ಕಾಗಿ ಚಾಲಿ ಅಡಿಕೆ ಸುಲಿಯುವ ಯಂತ್ರಗಳ ನಡುವೆ ಸ್ಪರ್ಧೆಯೊಂದನ್ನು ಏರ್ಪಡಿಸಿ ಉತ್ತಮ ಕಾರ್ಯಕುಶಲತೆ ಹೊಂದಿದ ಯಂತ್ರ ಆವಿಷ್ಕಾರ ಮಾಡಿದವರಿಗೆ ಸೂಕ್ತ ಬಹುಮಾನ ನೀಡಿ ಪ್ರೋತ್ಸಾಹಿಸಲು ಕ್ಯಾಂಪ್ಕೋ ಮುಂದಾಗಿದೆ.

ಸ್ಪರ್ಧಾ ವಿಜೇತರಿಗೆ ಫೆಬ್ರವರಿ 8ರಂದು ಕಾಸರಗೋಡು ಜಿಲ್ಲೆಯ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯುವ ಕೃಷಿ ಮೇಳದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಯಂತ್ರ ಕಾರ್ಯನಿರ್ವಹಿಸುವ ಸ್ಥಳಕ್ಕೆ ಬಂದು ಯಂತ್ರದ ಕಾರ್ಯಕುಶಲತೆಯನ್ನು ಖುದ್ದಾಗಿ ಗಮನಿಸಿ ಅಂಕ ನೀಡುವ ತಂಡವನ್ನು ಕ್ಯಾಂಪ್ಕೋ ನಿಯೋಜಿಸಲಿದ್ದುಇದಕ್ಕಾಗಿ ಯಂತ್ರ ಆವಿಷ್ಕಾರ ಮಾಡಿದವರು ನೋಂದಾವಣೆ ಮಾಡಬೇಕಿದೆ.

ನೋಂದಾವಣೆ ಮಾಡಲು ಕೊನೆಯ ದಿನ 25 ಜನವರಿ 2020. ನೋಂದಾಯಿಸಲು ಮತ್ತು ಸಂಪರ್ಕಕ್ಕೆ : ಕಿಶನ್ ಪಳ್ಳತ್ತಡ್ಕ, ಕ್ಯಾಂಪ್ಕೊ ಮುಖ್ಯಕಚೇರಿ, ಮಂಗಳೂರು,0824-2441594, ಮೊ.-9495096848, ಈ-ಮೇಲ್ – hrdcampcoho@gmail.com

ಷರತ್ತುಗಳಿಗಾಗಿ ಸಂಸ್ಥೆಯ ಜಾಲತಾಣ www.campco.orgಗೆ ಭೇಟಿ ನೀಡಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

55 minutes ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

20 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago