Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉದ್ಘಾಟನೆಗೊಂಡಿತು ಅಂತರಾಷ್ಟ್ರೀಯ ಗುಣಮಟ್ಟದ ಲ್ಯಾಬ್ : ಸಿದ್ಧವಾಗುತ್ತಿದೆ ತೋಟದ ಮಣ್ಣು ಪರೀಕ್ಷೆಗೆ ವ್ಯವಸ್ಥೆ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ನವೀಕರಣಗೊಂಡ ಎನಲೆಟಿಕಲ್ ಲ್ಯಾಬ್ (National Accreditation Board for Testing and Calibration Laboratories – NABL)  ಉದ್ಘಾಟನೆ ಬುಧವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಟಂದೂರು ನೂತನ ಲ್ಯಾಬ್ ಉದ್ಘಾಟಿಸಿ ಶುಭ ಹಾರೈಸಿದರು.

Advertisement
Advertisement

ಕ್ಯಾಂಪ್ಕೋ ಅಧ್ಯಕ್ಷ  ಎಸ್.ಆರ್. ಸತೀಶ್ಚಂದ್ರ ಸಭಾಧ್ಯಕ್ಷತೆ ವಹಿಸಿದರು. ಈ ಸಂದರ್ಭ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ , ಕ್ಯಾಂಪ್ಕೋ ಉಪಾಧ್ಯಕ್ಷ   ಶಂ.ನ.ಖಂಡಿಗೆ , ಸಾಮಾಜಿಕ ಕಾರ್ಯಕರ್ತ ಆರ್ ಸಿ ನಾರಾಯಣ ರೆಂಜ, ಪತ್ರಕರ್ತ ಮಹೇಶ್ , ಹಿರಿಯ ಅಧಿಕಾರಿ  ರಾಮಚಂದ್ರ ಕಾಮತ್,  ಕ್ಯಾಂಪ್ಕೋ ಎ.ಜಿ.ಎಂ ಇಂಜಿನಿಯರಿಂಗ್ ಅವಿನಾಶ್ ರೈ, ಎ.ಜಿ.ಎಂ ಟೆಕ್ನಿಕಲ್ ,ಶ್ಯಾಮ್ ಪ್ರಸಾದ್ ಎಚ್, ಎ.ಜಿ.ಎಂ ಪ್ರೊಡಕ್ಷನ್ ಅನೂಪ್ ಮೊದಲಾದವರು  ಉಪಸ್ಥಿತರಿದ್ದರು.

ಈ ನೂತನ ಲ್ಯಾಬ್ ನಲ್ಲಿ ಮೈಕ್ರೋಬಯೋಲಜಿ ಲ್ಯಾಬ್, ಕೆಮೆಸ್ಟ್ರಿ ಲ್ಯಾಬ್, ಕೋಕೋ ಬೀನ್ಸ್ ಹಾಗೂ ಇತರ ಕೃಷಿ ಉತ್ಪನ್ನಗಳ ಲ್ಯಾಬ್ ಎಂಬ ಮೂರು ವಿಭಾಗಗಳಿದೆ. ಲ್ಯಾಬಿನಲ್ಲಿ ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉತ್ಪಾದಿಸಿದ ಎಲ್ಲಾ ಉತ್ಪನ್ನಗಳನ್ನು ಹಾಗೂ ಉತ್ಪಾದನೆಗೆ ಬಳಕೆಯಾಗುವ ಕಚ್ಚಾ ವಸ್ತುಗಳನ್ನು ಹಾಗೂ ಉತ್ಪಾದನಾ ವಾತಾವರಣದಲ್ಲಿ ಈ ಲ್ಯಾಬ್ ನಲ್ಲಿ ಪರೀಕ್ಷೆಗೊಳಪಡಿಸಿ ಗುಣಮಟ್ಟವನ್ನು ಖಾತರಿಗೊಳಿಸಲಾಗುತ್ತದೆ.

ಮುಂದಿನ ದಿನದಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ತೋಟದ ಮಣ್ಣು ಪರೀಕ್ಷೆಯನ್ನು ಈ ಲ್ಯಾಬ್ ನಲ್ಲಿ ಅಳವಡಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

4 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

4 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

4 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

4 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

4 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

14 hours ago