ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉದ್ಘಾಟನೆಗೊಂಡಿತು ಅಂತರಾಷ್ಟ್ರೀಯ ಗುಣಮಟ್ಟದ ಲ್ಯಾಬ್ : ಸಿದ್ಧವಾಗುತ್ತಿದೆ ತೋಟದ ಮಣ್ಣು ಪರೀಕ್ಷೆಗೆ ವ್ಯವಸ್ಥೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ನವೀಕರಣಗೊಂಡ ಎನಲೆಟಿಕಲ್ ಲ್ಯಾಬ್ (National Accreditation Board for Testing and Calibration Laboratories – NABL)  ಉದ್ಘಾಟನೆ ಬುಧವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಟಂದೂರು ನೂತನ ಲ್ಯಾಬ್ ಉದ್ಘಾಟಿಸಿ ಶುಭ ಹಾರೈಸಿದರು.

Advertisement
Advertisement

ಕ್ಯಾಂಪ್ಕೋ ಅಧ್ಯಕ್ಷ  ಎಸ್.ಆರ್. ಸತೀಶ್ಚಂದ್ರ ಸಭಾಧ್ಯಕ್ಷತೆ ವಹಿಸಿದರು. ಈ ಸಂದರ್ಭ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ , ಕ್ಯಾಂಪ್ಕೋ ಉಪಾಧ್ಯಕ್ಷ   ಶಂ.ನ.ಖಂಡಿಗೆ , ಸಾಮಾಜಿಕ ಕಾರ್ಯಕರ್ತ ಆರ್ ಸಿ ನಾರಾಯಣ ರೆಂಜ, ಪತ್ರಕರ್ತ ಮಹೇಶ್ , ಹಿರಿಯ ಅಧಿಕಾರಿ  ರಾಮಚಂದ್ರ ಕಾಮತ್,  ಕ್ಯಾಂಪ್ಕೋ ಎ.ಜಿ.ಎಂ ಇಂಜಿನಿಯರಿಂಗ್ ಅವಿನಾಶ್ ರೈ, ಎ.ಜಿ.ಎಂ ಟೆಕ್ನಿಕಲ್ ,ಶ್ಯಾಮ್ ಪ್ರಸಾದ್ ಎಚ್, ಎ.ಜಿ.ಎಂ ಪ್ರೊಡಕ್ಷನ್ ಅನೂಪ್ ಮೊದಲಾದವರು  ಉಪಸ್ಥಿತರಿದ್ದರು.

ಈ ನೂತನ ಲ್ಯಾಬ್ ನಲ್ಲಿ ಮೈಕ್ರೋಬಯೋಲಜಿ ಲ್ಯಾಬ್, ಕೆಮೆಸ್ಟ್ರಿ ಲ್ಯಾಬ್, ಕೋಕೋ ಬೀನ್ಸ್ ಹಾಗೂ ಇತರ ಕೃಷಿ ಉತ್ಪನ್ನಗಳ ಲ್ಯಾಬ್ ಎಂಬ ಮೂರು ವಿಭಾಗಗಳಿದೆ. ಲ್ಯಾಬಿನಲ್ಲಿ ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉತ್ಪಾದಿಸಿದ ಎಲ್ಲಾ ಉತ್ಪನ್ನಗಳನ್ನು ಹಾಗೂ ಉತ್ಪಾದನೆಗೆ ಬಳಕೆಯಾಗುವ ಕಚ್ಚಾ ವಸ್ತುಗಳನ್ನು ಹಾಗೂ ಉತ್ಪಾದನಾ ವಾತಾವರಣದಲ್ಲಿ ಈ ಲ್ಯಾಬ್ ನಲ್ಲಿ ಪರೀಕ್ಷೆಗೊಳಪಡಿಸಿ ಗುಣಮಟ್ಟವನ್ನು ಖಾತರಿಗೊಳಿಸಲಾಗುತ್ತದೆ.

ಮುಂದಿನ ದಿನದಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ತೋಟದ ಮಣ್ಣು ಪರೀಕ್ಷೆಯನ್ನು ಈ ಲ್ಯಾಬ್ ನಲ್ಲಿ ಅಳವಡಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

6 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

6 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

6 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

16 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

17 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

20 hours ago