Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉದ್ಘಾಟನೆಗೊಂಡಿತು ಅಂತರಾಷ್ಟ್ರೀಯ ಗುಣಮಟ್ಟದ ಲ್ಯಾಬ್ : ಸಿದ್ಧವಾಗುತ್ತಿದೆ ತೋಟದ ಮಣ್ಣು ಪರೀಕ್ಷೆಗೆ ವ್ಯವಸ್ಥೆ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ನವೀಕರಣಗೊಂಡ ಎನಲೆಟಿಕಲ್ ಲ್ಯಾಬ್ (National Accreditation Board for Testing and Calibration Laboratories – NABL)  ಉದ್ಘಾಟನೆ ಬುಧವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಟಂದೂರು ನೂತನ ಲ್ಯಾಬ್ ಉದ್ಘಾಟಿಸಿ ಶುಭ ಹಾರೈಸಿದರು.

ಕ್ಯಾಂಪ್ಕೋ ಅಧ್ಯಕ್ಷ  ಎಸ್.ಆರ್. ಸತೀಶ್ಚಂದ್ರ ಸಭಾಧ್ಯಕ್ಷತೆ ವಹಿಸಿದರು. ಈ ಸಂದರ್ಭ ಕ್ಯಾಂಪ್ಕೋ ವ್ಯವಸ್ಥಾಪಕ ನಿರ್ದೇಶಕ ಸುರೇಶ್ ಭಂಡಾರಿ , ಕ್ಯಾಂಪ್ಕೋ ಉಪಾಧ್ಯಕ್ಷ   ಶಂ.ನ.ಖಂಡಿಗೆ , ಸಾಮಾಜಿಕ ಕಾರ್ಯಕರ್ತ ಆರ್ ಸಿ ನಾರಾಯಣ ರೆಂಜ, ಪತ್ರಕರ್ತ ಮಹೇಶ್ , ಹಿರಿಯ ಅಧಿಕಾರಿ  ರಾಮಚಂದ್ರ ಕಾಮತ್,  ಕ್ಯಾಂಪ್ಕೋ ಎ.ಜಿ.ಎಂ ಇಂಜಿನಿಯರಿಂಗ್ ಅವಿನಾಶ್ ರೈ, ಎ.ಜಿ.ಎಂ ಟೆಕ್ನಿಕಲ್ ,ಶ್ಯಾಮ್ ಪ್ರಸಾದ್ ಎಚ್, ಎ.ಜಿ.ಎಂ ಪ್ರೊಡಕ್ಷನ್ ಅನೂಪ್ ಮೊದಲಾದವರು  ಉಪಸ್ಥಿತರಿದ್ದರು.

ಈ ನೂತನ ಲ್ಯಾಬ್ ನಲ್ಲಿ ಮೈಕ್ರೋಬಯೋಲಜಿ ಲ್ಯಾಬ್, ಕೆಮೆಸ್ಟ್ರಿ ಲ್ಯಾಬ್, ಕೋಕೋ ಬೀನ್ಸ್ ಹಾಗೂ ಇತರ ಕೃಷಿ ಉತ್ಪನ್ನಗಳ ಲ್ಯಾಬ್ ಎಂಬ ಮೂರು ವಿಭಾಗಗಳಿದೆ. ಲ್ಯಾಬಿನಲ್ಲಿ ಕ್ಯಾಂಪ್ಕೋ ಚಾಕಲೇಟು ಕಾರ್ಖಾನೆಯಲ್ಲಿ ಉತ್ಪಾದಿಸಿದ ಎಲ್ಲಾ ಉತ್ಪನ್ನಗಳನ್ನು ಹಾಗೂ ಉತ್ಪಾದನೆಗೆ ಬಳಕೆಯಾಗುವ ಕಚ್ಚಾ ವಸ್ತುಗಳನ್ನು ಹಾಗೂ ಉತ್ಪಾದನಾ ವಾತಾವರಣದಲ್ಲಿ ಈ ಲ್ಯಾಬ್ ನಲ್ಲಿ ಪರೀಕ್ಷೆಗೊಳಪಡಿಸಿ ಗುಣಮಟ್ಟವನ್ನು ಖಾತರಿಗೊಳಿಸಲಾಗುತ್ತದೆ.

ಮುಂದಿನ ದಿನದಲ್ಲಿ ಕ್ಯಾಂಪ್ಕೋ ಸದಸ್ಯ ಬೆಳೆಗಾರರ ತೋಟದ ಮಣ್ಣು ಪರೀಕ್ಷೆಯನ್ನು ಈ ಲ್ಯಾಬ್ ನಲ್ಲಿ ಅಳವಡಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ  ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-06-2026 | ಕರಾವಳಿ, ಮಲೆನಾಡಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಉಳಿದ ಭಾಗಗಳಲ್ಲಿ ಬಿಸಿಲು-ಮೋಡದ ವಾತಾವರಣ

ರಾಜ್ಯದಲ್ಲಿ ಮುಂಗಾರು ಇನ್ನೂ ದುರ್ಬಲವಾಗಿದ್ದು, ಸುಳ್ಯ, ಕಡಬ ಹಾಗೂ ಸೋಮವಾರಪೇಟೆ ಭಾಗಗಳಲ್ಲಿ ಮಾತ್ರ…

6 hours ago

ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚು | ಕಿತ್ತಳೆ ಬಣ್ಣಕ್ಕೆ ತಿರುಗಿದ ಆಕಾಶ, ಭೀಕರ ಕಾಡ್ಗಿಚ್ಚಿಗೆ 12 ಬಲಿ- ಸ್ಪೇನ್‌ನಲ್ಲಿ ಭಯಾನಕ ದುರಂತ

ದಕ್ಷಿಣ ಸ್ಪೇನ್‌ನಲ್ಲಿ ಭೀಕರ ಕಾಡ್ಗಿಚ್ಚಿನಿಂದ 12 ಮಂದಿ ಸಾವನ್ನಪ್ಪಿದ್ದು, 23 ಮಂದಿ ನಾಪತ್ತೆಯಾಗಿದ್ದಾರೆ.…

9 hours ago

ತೀವ್ರ ಬಿಸಿಗೆ ತುತ್ತಾಗುವ ನಗರಗಳಲ್ಲಿ ಭಾರತ ಅಗ್ರಸ್ಥಾನ: ವಿಶ್ವದ ಟಾಪ್-50 ಪಟ್ಟಿಯಲ್ಲಿ 14 ಭಾರತೀಯ ನಗರಗಳು

ತೀವ್ರ ಬಿಸಿಯ ಅಪಾಯದಲ್ಲಿರುವ ವಿಶ್ವದ ಟಾಪ್-50 ನಗರಗಳಲ್ಲಿ 14 ಭಾರತೀಯ ನಗರಗಳು ಸೇರಿವೆ.…

10 hours ago

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

14 hours ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

1 day ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

2 days ago