ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಪ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ,ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ,ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್. ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.
ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು.ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…