Advertisement
ಸುದ್ದಿಗಳು

ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವ

Share

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಪ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಪ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ   ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ,ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ,ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್. ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತ ರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.

ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು.ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

23 minutes ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

22 hours ago

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

1 day ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 day ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

1 day ago