ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವ

January 27, 2020
5:58 PM

ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಫ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರಿನ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಇವರು ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ ಖಂಡಿಗ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ, ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ, ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.

Advertisement

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್.ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.

ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group