ಪುತ್ತೂರು: ಕ್ಯಾಂಪ್ಕೋ ಚಾಕಲೇಟು ಫ್ಯಾಕ್ಟರಿ ಎಂಪ್ಲಾಯಿಸ್ ರಿಕ್ರಿಯೇಷನ್ ಸೆಂಟರಿನ ವಾರ್ಷಿಕೋತ್ಸವವು ಚಾಕಲೇಟು ಫ್ಯಾಕ್ಟರಿ ವಸತಿ ನಿಲಯದ ಸಭಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೋ ನಿಯಮಿತ ಮಂಗಳೂರಿನ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಇವರು ವಹಿಸಿದ್ದರು. ವೇದಿಕೆಯಲ್ಲಿ ಕ್ಯಾಂಪ್ಕೋ ಉಪಾಧ್ಯಕ್ಷರಾದ ಶಂಕರನಾರಾಯಣ ಭಟ್ ಖಂಡಿಗ, ಮೆನೆಜಿಂಗ್ ಡೈರೆಕ್ಟರ್ ಎಂ.ಸುರೇಶ್ ಭಂಡಾರಿ, ಕ್ಯಾಂಪ್ಕೋ ನಿರ್ದೇಶಕರುಗಳಾದ ಚನಿಲ ತಿಮ್ಮಪ್ಪ ಶೆಟ್ಟಿ, ಕೃಷ್ಣ ಪ್ರಸಾದ್ ಮಡ್ತಿಲ, ಚಾಕಲೇಟು ಪ್ಯಾಕ್ಟರಿ ಡೆಪ್ಯುಟಿ ಜನರಲ್ ಮೆನೇಜರ್ ಪ್ರಾನ್ಸಿಸ್ ಡಿಸೋಜ, ಯೂನಿಯನ್ ಅಧ್ಯಕ್ಷರಾದ ರಾಧಾಕೃಷ್ಣ ಭಟ್, ರಿಕ್ರಿಯೇಷನ್ ಸೆಂಟರಿನ ಅಧ್ಯಕ್ಷರಾದ ಬಿ.ಜಿ.ರಂಗನಾಥ್, ಸೆಕ್ರೆಟರಿ ಶಾಂತಿ ಹೊಳ್ಳ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ , ಪಿಯುಸಿ ಹಾಗೂ ಡಿಗ್ರಿಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ ಕ್ಯಾಂಪ್ಕೋ ಉದ್ಯೋಗಿಗಳ ಮಕ್ಕಳಾದ ಪ್ರಣೀತ್ ಆರ್.ಪಿ, ಹರೀಶ್ ಭಟ್.ಕೆ, ಶಮಾ, ಅನುಪಮಾ.ಟಿ, ಸಾತ್ವಿಕ್, ಚೈತನ್ಯ ರಾಜೇಶ್ವರಿ.ಬಿ.ಆರ್, ವೈಶಾಕ್.ಕೆ.ಎಮ್, ಅಜಯ್ ಕೃಷ್ಣ.ಎಮ್, ಸಹನಾ ಮತ್ತು ಕ್ರೀಡೆಯಲ್ಲಿ ಹೆಸರುಗಳಿಸಿದ ದಿಗಂತ್.ವಿ.ಎಸ್, ಅನಘ.ಕೆ.ಎಮ್, ಅನುಶ್ರೀ, ಪ್ರಣವ್ ಹೊಳ್ಳ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಪಧ್ಮನಾಭ, ಗೋಪಾಲ್ ರಾವ್, ಬಿ.ರಾಮ, ಚಂದ್ರಶೇಖರ ಗೌಡ, ಬಾಲಚಂದ್ರ ಶೆಟ್ಟಿ ಇವರುಗಳಿಗೆ ಸನ್ಮಾನಿಸಲಾಯಿತು.
ವಾರ್ಷಿಕ ಕ್ರೀಡಾ ಕೂಟದಲ್ಲಿ ವಿಜೇತರಾದ ಎಲ್ಲರಿಗೂ ಬಹುಮಾನ ನೀಡಲಾಯಿತು. ಸಭಾ ಕಾರ್ಯಕ್ರಮದ ನಂತರ ಕ್ಯಾಂಪ್ಕೋ ಉದ್ಯೋಗಸ್ಥರ ಮನೆಯವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಭೋಜನ ವ್ಯವಸ್ಥೆಯನ್ನು ಮಾಡಲಾಗಿತ್ತು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…