Advertisement
ಕಾರ್ಯಕ್ರಮಗಳು

ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ 66 ನೇ ಸಹಕಾರಿ ಸಪ್ತಾಹ ಆಚರಣೆ

Share
ಪುತ್ತೂರು: ಅಂತರ್ ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್ ಆರ್. ಸತೀಶ್ಚಂದ್ರ ಸಹಕಾರಿ ಧ್ವಜಾರೋಹಣ ನೆರೆವೇರಿಸುವ ಮೂಲಕ ಉದ್ಘಾಟಿಸಿದರು.
ಕ್ಯಾಂಪ್ಕೋ ಸ್ಥಾಪಕಾಧ್ಯಕ್ಷ  ವಾರಣಾಶಿ ಸುಬ್ರಾಯ ಭಟ್ಟರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರಲ್ಲಿ ಆರ್ಥಿಕ ಸಾಮರಸ್ಯ ,ಆತ್ಮವಿಶ್ವಾಸ, ಸ್ವ ಸಾಮರ್ಥ್ಯ ಹೆಚ್ಚಿಸುವಲ್ಲಿ ಸಹಕಾರಿ ಸಂಸ್ಥೆಗಳು ಕೊಡುಗೆ ನೀಡಿವೆ ಎಂದರು. ಸಹಕಾರಿ ರಂಗಕ್ಕೆ ಕೊಡುಗೆ ನೀಡಿದ ಹಿರಿಯರನ್ನು ಸ್ಮರಿಸಿದ ಅವರು ಇಂದು ರಾಜ್ಯವ್ಯಾಪಿ ಸುಮಾರು 40,000 ಕ್ಕೂ ಅಧಿಕ ಸಹಕಾರಿ ಸಂಸ್ಥೆಗಳು ಇದ್ದು 2.5 ಕೋಟಿಯಷ್ಟು ಸದಸ್ಯರು ವ್ಯವಹರಿಸುತ್ತಿದ್ದಾರೆ ಎಂದು ತಿಳಿಸಿದರು.
ಕ್ಯಾಂಪ್ಕೋದ  ಸಾಮಾಜಿಕ ಜಾಲತಾಣದ ವಿವಿಧ ಲಿಂಕ್ ಗಳನ್ನು ಪರಿಚಯಿಸುವ ಕ್ಯೂಆರ್ ಕೋಡ್ ಹೊಂದಿರುವ ಬಿತ್ತಿಪತ್ರವನ್ನು ಬಿಡುಗಡೆಗೊಳಿಸಿ ಅತೀ ಹೆಚ್ಚು ಜನರು ಇದನ್ನು ಅನುಸರಿಸಿ ಕ್ಯಾಂಪ್ಕೋ ಬ್ರಾಂಡ್ ಪ್ರಸಿದ್ಧಿಗೊಳಿಸಲು ಕರೆನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿ ಡಿ.ಜಿ.ಮ್ ಫ್ರಾನ್ಸಿಸ್ ಡಿ .ಸೋಜಾ , ಎ.ಜಿ.ಮ್ ಇಂಜಿನಿಯರಿಂಗ್ ಅವಿನಾಶ್ ರೈ, ಎ.ಜಿ.ಎಂ ಪ್ರೊಡಕ್ಷನ್ ಅನೂಪ್, ಎ.ಜಿ.ಎಮ್ ಟೆಕ್ನಿಕಲ್ ಶ್ಯಾಂಪ್ರಸಾದ್ ಉಪಸ್ಥಿತರಿದ್ದರು. ಭದ್ರತಾ ವಿಭಾಗದ ಮುಖ್ಯಸ್ಥರಾದ ಬಿ .ಜಿ ರಂಗನಾಥ್ ದ್ವಜಾರೋಹಣ ನಿರ್ವಹಿಸಿದರು. ರಾಧೇಶ್ ಕುಂದಲ್ಪಾಡಿ ಪ್ರಸ್ತಾವನೆಗೈದು, ಕೃಷ್ಣ ಭಟ್ ಕಾರ್ಯಕ್ರಮ ನಿರೂಪಿಸಿದರು .
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 hour ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

12 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

24 hours ago