ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.
ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…