Advertisement
ಸುದ್ದಿಗಳು

ಕ್ಯಾಂಪ್ಕೋ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆಯ ಮೊದಲ ನೆರವು

Share

ಮಂಗಳೂರು: ಕ್ಯಾಂಪ್ಕೊ ಸಂಸ್ಥೆ ಸದಸ್ಯರಿಗೆ ತಂದ ವಿನೂತನ ಯೋಜನೆ ಅಪಘಾತವಾದ ಕೃಷಿಕ, ಕೃಷಿ ಕಾರ್ಮಿಕ  ಮೃತಪಟ್ಟರೆ ನೀಡುವ ಸಹಾಯಧನದ ಯೋಜನೆಯ ಮೊದಲ ನೆರವು ಈಚೆಗೆ ನೀಡಲಾಯಿತು.

ಕ್ಯಾಂಪ್ಕೋ ಅಧ್ಯಕ್ಷ ಎಸ್. ಆರ್. ಸತೀಶ್ಚಂದ್ರ ಅವರು ಇತ್ತೀಚೆಗೆ ಅವಘಡದಲ್ಲಿ ಮರಣ ಹೊಂದಿದ ಕ್ಯಾಂಪ್ಕೋದ ಸಕ್ರಿಯ ಸದಸ್ಯರಾದ  ವಾಮದಪದವು ಬಾರೆಕಿನಡೆ ಮನೆಯ ಗೋಪಾಲ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಕ್ಯಾಂಪ್ಕೋ ಸಂಸ್ಥೆಯಿಂದ ನೀಡಲಾಗುವ ಸಹಾಯ ಧನ ರೂಪಾಯಿ 50000/- ದ ಚೆಕ್ಕನ್ನು ಗೋಪಾಲ ಶೆಟ್ಟಿಯವರ ಪತ್ನಿ  ಗಿರಿಜಾ ಶೆಟ್ಟಿ ಇವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕ್ಯಾಂಪ್ಕೋ ನಿರ್ದೇಶಕರಾದ ಬಿ. ತಿಮ್ಮಪ್ಪ ಶೆಟ್ಟಿ, ಪುತ್ತೂರು ಪ್ರಾದೇಶಿಕ ಕಚೇರಿಯ ಹಿರಿಯ ಪ್ರಬಂಧಕರಾದ ಗೋವಿಂದ ಭಟ್, ವಾಮದಪದವು ಶಾಖೆಯ ಪುರುಷೋತ್ತಮ.ಕೆ, ವಾಮದ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಯಶೋಧರ ಶೆಟ್ಟಿ, ಉಪಾಧ್ಯಕ್ಷರಾದ ಗಣನಾಥ ಶೆಟ್ಟಿ, ಕಾರ್ಯದರ್ಶಿಗಳಾದ ಅಲ್ಬರ್ಟ್ ಡಿಸೋಜಾ, ಸಹಕಾರಿ ಸಂಘದ ನಿರ್ದೇಶಕರುಗಳಾದ ಕಮಲ್ ಶೆಟ್ಟಿ, ಹಿರಿಯ ಸದಸ್ಯ ಬೆಳೆಗಾರರಾದ  ಸುಬ್ಬಣ್ಣ ಶಾಸ್ತ್ರೀ, ಗೋಪಾಲಕೃಷ್ಣ ಚೌಟ,
ಲಕ್ಷ್ಮೀನಾರಾಯಣ ಪರಾಡ್ಕರ್, ಪುರುಷೋತ್ತಮ ಶೆಟ್ಟಿ ಬಾರಕ್ಕಿನಡೆ, ವೆಂಕಟೇಶ್ ಭಟ್, ವಿಜಯ ರೈ, ಸುಧಿರ್ ಶೆಟ್ಟಿ ಕುಂಡೋಳಿ, ದಿನೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

4 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

11 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

12 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

19 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

20 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago