Advertisement
ರಾಜ್ಯ

ಕ್ಯಾಂಪ್ಕೋ ಹೊಸ ಚಾಕೋಲೇಟ್ “ಸ್ಪೈಸ್ ಟೋಫಿ” ಬಿಡುಗಡೆ

Share

ಮಂಗಳೂರು: ಕ್ಯಾಂಪ್ಕೋ ವತಿಯಿಂದ ನೂತನ ಚಾಕೋಲೇಟ್ ಸ್ಪೈಸ್ ಟೋಫಿ ಬುಧವಾರ ಬಿಡುಗಡೆಗೊಂಡಿದೆ. ನೂತನ ಉತ್ಪನ್ನವು ಸಕ್ಕರೆ ಆಧಾರಿತ ಸಿರಪ್ ಗಳಿಂದ ಮತ್ತು  ಸೈಸರ್ಗಿಕ ಕಾಳುಮೆಣಸು ಪುಡಿ ಹಾಗೂ ಶಂಠಿ ಸಾರಗಳಿಂದ ತಯಾರಿಸಲ್ಪಟ್ಟ ಉತ್ಪನ್ನವಾಗಿದೆ.

ನೂತನ ಉತ್ಪನ್ನ ಸ್ಪೈಸ್ ಟೋಫಿ ಯಲ್ಲಿ ಗ್ಲೂಕೋಸ್ ನೊಂದಿಗೆ ಶುಂಠಿ ಸಾರ ಹಾಗೂ ಕಾಳುಮೆಣಸು ಪುಡಿ ಇರುವುದರಿಂದ ಇದು  ದೇಹದ ಸಮತೋಲನ ಕಾಪಾಡುವಲ್ಲಿ ಹಾಗೂ ದೇಹವನ್ನು ತಂಪಾಗಿರಿಸುವಲ್ಲಿ  ಮತ್ತು  ದಣಿವನ್ನು ನಿವಾರಿಸುವಲ್ಲಿ  ಸಹಕಾರಿಯಾಗುತ್ತದೆ ಅಲ್ಲದೆ ಮೌತ್ ಫ್ರೆಶ್ನರ್ ಆಗಿಯೂ ಕೂಡಾ ಕೆಲಸ ಮಾಡುತ್ತದೆ. ಕ್ಯಾಂಪ್ಕೋದಿಂದ ತಯಾರಿಸಲ್ಪಟ್ಟ ವಿಶಿಷ್ಟ ಉತ್ಪನ್ನ ಇದಾಗಿದೆ. ಆರಂಭಿಕ ಹಂತದಲ್ಲೇ ಉತ್ತಮ ಪ್ರತಿಕ್ರೆಯೆ ವ್ಯಕ್ತವಾಗಿದೆ.

ಮಂಗಳೂರಿನಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ಪೈಸ್ ಟೋಫಿ ಬಿಡುಗಡೆಗೊಳಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ  ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ , ಉಪಾಧ್ಯಕ್ಷ ಶಂ.ನಾ ಖಂಡಿಗೆ, ಕ್ಯಾಂಪ್ಕೋ ಆಡಳಿತ ನಿರ್ದೇಶಕ ಸುರೇಶ್ಚಂದ್ರ ಭಂಡಾರಿ ಮೊದಲಾದವರು ಮಾತನಾಡಿದರು.

ಕೃಷಿಕರು ಸ್ವಾವಲಂಬನೆ ಸಾಧಿಸುವ ಹೆಬ್ಬಯಕೆಯೊಂದಿಗೆ ಆರಂಭವಾದ ಸಹಕಾರಿ  ಸಂಸ್ಥೆ ಕ್ಯಾಂಪ್ಕೋ. ಅಡಿಕೆ ಮಾತ್ರವಲ್ಲ ಇಂದು ಕೊಕೋ, ಕಾಳುಮೆಣಸು, ರಬ್ಬರ್ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ವಹಿಸಿದೆ. ಚಾಕೋಲೇಟ್ ತಯಾರಿಕೆಯ ಮೂಲಕ ಕೊಕೋ ಮೌಲ್ಯವರ್ಧನೆಯನ್ನೂ ಮಾಡಿದೆ.  ಈಗ ಚಾಕೋಲೇಟ್ ಮಾರುಕಟ್ಟೆಯಲ್ಲೂ ದೇಶದಲ್ಲೇ ಕ್ಯಾಂಪ್ಕೋ ಹೆಸರು ಮಾಡಿದೆ. ಇದೀಗ ಚಾಕೋಲೇಟ್ ಬಗ್ಗೆ ವಿಶಿಷ್ಟ ಸೃಜನಾತ್ಮಕ ಪ್ರಚಾರ ಅಭಿಯಾನವನ್ನು  ಕೈಗೊಳ್ಳಲಾಗಿದೆ. 60 ಸೆಕೆಂಡ್ ಡಿಜಿಟಲ್ ಚಿತ್ರದ ಮೂಲಕ ಮುದ್ರಣ, ರೇಡಿಯೋ, ದೃಶ್ಯಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ  ವ್ಯಾಪಕ ಪ್ರಚಾರ ಅಭಿಯಾನ ನಡೆಸಲಾಗುತ್ತಿದೆ, ಜನಸಾಮಾನ್ಯರು ಕ್ಯಾಂಪ್ಕೋ ಚಾಕಲೇಟ್ ನೊಂದಿಗೆ ಸಂಭ್ರಮಿಸುವಂತೆ ಪ್ರೇರಣೆ ನೀಡುವುದು  ಈ ಅಭಿಯಾನದ ಉದ್ದೇಶವಾಗಿದೆ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

24 minutes ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

3 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

12 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

13 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

19 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

20 hours ago