(ಇಂಟರ್ ನೆಟ್ ಚಿತ್ರ )
ಕೊಟ್ಟಾಯಂ: ಇದೊಂದು ಆಘಾತಕಾರಿ ಚಿಕಿತ್ಸೆ. ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…