(ಇಂಟರ್ ನೆಟ್ ಚಿತ್ರ )
ಕೊಟ್ಟಾಯಂ: ಇದೊಂದು ಆಘಾತಕಾರಿ ಚಿಕಿತ್ಸೆ. ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…