(ಇಂಟರ್ ನೆಟ್ ಚಿತ್ರ )
ಕೊಟ್ಟಾಯಂ: ಇದೊಂದು ಆಘಾತಕಾರಿ ಚಿಕಿತ್ಸೆ. ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…