(ಇಂಟರ್ ನೆಟ್ ಚಿತ್ರ )
ಕೊಟ್ಟಾಯಂ: ಇದೊಂದು ಆಘಾತಕಾರಿ ಚಿಕಿತ್ಸೆ. ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…