Advertisement
ರಾಷ್ಟ್ರೀಯ

ಕ್ಯಾನ್ಸರ್ ಇಲ್ಲದ ಮಹಿಳೆಗೆ ಕಿಮೋಥೆರಪಿ…! ಕೇರಳದಲ್ಲಿ ಆಘಾತಕಾರಿ ಚಿಕಿತ್ಸೆ…!

Share

ಕೊಟ್ಟಾಯಂ:  ಇದೊಂದು ಆಘಾತಕಾರಿ ಚಿಕಿತ್ಸೆ.  ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು  ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.

ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ  ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ  ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್​ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ. ಚಿಕಿತ್ಸೆಗೆಂದು ಮಹಿಳೆ ಕೊಟ್ಟಾಯಂನ ಸರಕಾರಿ ಮೆಡಿಕಲ್​ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದರು ಅಲ್ಲಿ ಖಾಸಗಿ ಲ್ಯಾಬ್ ವರದಿ ಆಧರಿಸಿ ಕಿಮೋಥೆರಪಿ ಚಿಕಿತ್ಸೆಯನ್ನೂ ನೀಡಿದ್ದಾರೆ. ಎರಡು ವಾರಗಳ ಕಾಲ ಚಿಕಿತ್ಸೆ ನಡೆದಿದೆ. ನಂತರ ಸರಕಾರಿ ಆಸ್ಪತ್ರೆ ಲ್ಯಾಬ್ ನಲ್ಲಿ ಮಹಿಳೆಗೆ ಕ್ಯಾನ್ಸರ್ ಇಲ್ಲವೆಂದು ವರದಿ ನೀಡಲಾಗಿದೆ. ಹೀಗಾಗಿ ಮಹಿಳೆ ಮತ್ತೆರಡು ಕಡೆ ಪರೀಕ್ಷೆ ನಡೆಸಿದ್ದಾಳೆ. ಅಲ್ಲಿಯೂ ಕ್ಯಾನ್ಸರ್ ಇಲ್ಲವೆಂಬ ವರದಿ ಬಂದಿದೆ. ಈ ಬಗ್ಗೆ ಮಹಿಳೆ ದೂರು ನೀಡಿದ್ದಾಳೆ. ಕೀಮೊಥೆರಪಿ ನಂತರ ಮಹಿಳೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಕುರಿತು ಕೇರಳ ಆರೋಗ್ಯ ಸಚಿವರು ತನಿಖೆಗೆ ಆದೇಶಿಸಿದ್ದಾರೆ.

ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

4 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

4 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

22 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago