(ಇಂಟರ್ ನೆಟ್ ಚಿತ್ರ )
ಕೊಟ್ಟಾಯಂ: ಇದೊಂದು ಆಘಾತಕಾರಿ ಚಿಕಿತ್ಸೆ. ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…