(ಇಂಟರ್ ನೆಟ್ ಚಿತ್ರ )
ಕೊಟ್ಟಾಯಂ: ಇದೊಂದು ಆಘಾತಕಾರಿ ಚಿಕಿತ್ಸೆ. ಮಹಿಳೆಯೊಬ್ಬರಿಗೆ ಕ್ಯಾನ್ಸರ್ ಇದೆ ಎಂದು ಚಿಕಿತ್ಸೆ ನೀಡಿದ ಬಳಿಕ ಯಾವುದೇ ಕ್ಯಾನ್ಸರ್ ಅಂಶ ಇಲ್ಲದೇ ಇರುವುದು ಬೆಳಕಿಗೆ ಬಂದಿದೆ. ಅದಾಗಲೇ ಕಿಮೋಥೆರಪಿ ಚಿಕಿತ್ಸೆ ನಡೆದಿತ್ತು. ಇದೀಗ ಮಹಿಳೆ ಸಂಕಷ್ಟ ಎದುರಿಸುತ್ತಿದ್ದಾರೆ.
ಕೊಟ್ಟಾಯಂನ 38 ವರ್ಷದ ರಜನಿ ಎಂಬ ಮಹಿಳೆಯ ಸ್ತನದಲ್ಲಿ ಗಂಟು ಕಾಣಿಸಿಕೊಂಡಿತ್ತು. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದ್ದು, ಅದರಲ್ಲಿ ಕ್ಯಾನ್ಸರ್ ಇದೆ ಎಂಬ ವರದಿ ಬಂದಿದೆ. ಈ ವರದಿ ಆಧಾರದ ಮೇಲೆ ಸರಕಾರಿ ಆಸ್ಪತ್ರೆ ವೈದ್ಯರು ಕೀಮೊಥೆರಪಿ ಮಾಡಿದ್ದರಂತೆ. ಮಹಿಳೆಗೆ ಕ್ಯಾನ್ಸರ್ ಇಲ್ಲದಿದ್ದರೂ ವೈದ್ಯರು ಕಿಮೋಥೆರಪಿ ನೀಡಿದ್ದು ಈಗ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಕ್ಯಾನ್ಸರ್ ಬಗ್ಗೆ ವಿಪರೀತ ಚರ್ಚೆ ನಡೆಯುತ್ತಿದೆ. ಅದರ ಚಿಕಿತ್ಸೆ ಬಗ್ಗೆ ಎರಡು ಪಟ್ಟು ಹೆಚ್ಚು ಚರ್ಚೆ ನಡೆಯುತ್ತಿದೆ. ವಿಪರೀತ ಖರ್ಚಾಗುವ ಕ್ಯಾನ್ಸರ್ ಚಿಕಿತ್ಸೆಗೆ ಸರಕಾರದಿಂದ ಸಾಕಷ್ಟು ವ್ಯವಸ್ಥೆ ಮಾಡಲಾಗುತ್ತಿದೆ. ಹಾಗಿದ್ದರೂ ರೋಗಿಗಳು ತಕ್ಷಣದ ಚಿಕಿತ್ಸೆಗೆ ಒಳಪಡುವಂತೆ ಮಾಡುವ ಕೆಲವು ದಂಧೆಗಳು ನಡೆಯುತ್ತಿರುವ ಬಗ್ಗೆ ಆರೋಪಗಳು ಇವೆ. ಹೀಗಾಗಿ ಸರಿಯಾದ ಚಿಕಿತ್ಸೆ ಹಾಗೂ ಪರೀಕ್ಷೆಗಳು ಅಗತ್ಯವಾಗಿದೆ ಎಂಬುದಕ್ಕೆ ಕೇರಳದ ಈ ಘಟನೆ ಸಾಕ್ಷಿಯಾಗಿದೆ.
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…