Advertisement
ವಿಶೇಷ ವರದಿಗಳು

‘ಕ್ಯಾಶ್ಯೂ ಇಂಡಿಯಾ ಆಪ್ ‘| ಬೆಳೆ ಸಂಬಂಧೀ ಆಪ್ಸ್ ತಯಾರಿಕೆಯಲ್ಲಿ ವಿನೂತನ ಹೆಜ್ಜೆ | ಗೇರುಕೃಷಿಕರಿಗೆ ಇದು ಪ್ರಯೋಜನ

Share

ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನಿಂದ “ಕ್ಯಾಶ್ಯೂ ಇಂಡಿಯಾ” (Cashew India)  ಆಪ್ ನ್ನು ಗೇರು ಕೃಷಿಕರು ಹಾಗೂ ಗೇರಿಗೆ ಸಂಬಂಧಿಸಿದ ಎಲ್ಲರಿಗಾಗಿ ಅಭಿವೃದ್ಧಿಗೊಳಿಸಲಾಗಿದೆ.

ಗೂಗಲ್ ಪ್ಲೇಸ್ಟೋರಿನಲ್ಲಿ ಲಭ್ಯವಿರುವ ಇದು ಕೃಷಿ ಆಸಕ್ತರೆಲ್ಲರೂ ನೋಡಲೇಬೇಕಾದ  ಆಪ್. ಬೆಳೆ ಸಂಬಂಧೀ ಆಪ್ಸ್ ತಯಾರಿಕೆಯಲ್ಲಿ ಇದೊಂದು ಮಾದರಿಯಾಗಬಲ್ಲ ವಿನೂತನ ಹೆಜ್ಜೆ. ‘ಕೃಷಿಕಸ್ನೇಹಿ’, ‘ಸಮಗ್ರ ಮಾಹಿತಿ’, ‘ಸುಲಭ ಬಳಕೆ’ ‘ದೇಶವ್ಯಾಪಿ‘ ಮಾನದಂಡಗಳನ್ನಿಟ್ಟುಕೊಂಡು ರೂಪಿಸಿದ ಈ ‘ಕ್ಯಾಶ್ಯೂ ಇಂಡಿಯಾ’ ಆಪ್ ವೈಶಿಷ್ಟ್ಯಗಳಿಲ್ಲಿವೆ.

ಏನಿದೆ ವಿಶೇಷತೆಗಳು ?:

  • ಗೇರು ಕಸಿಗಿಡಗಳು, ನರ್ಸರಿ, ಕೃಷಿ, ಕೀಟ ಮತ್ತು ರೋಗ ನಿರ್ವಹಣೆ, ಕೊಯ್ಲೋತ್ತರ ಸಂಸ್ಕರಣೆ, ಮಾರುಕಟ್ಟೆ ಮಾಹಿತಿ, ಇ-ಮಾರುಕಟ್ಟೆ, ಗೇರಿಗೆ ಸಂಬಂಧಪಟ್ಟ ಕೃಷಿಕರು, ಸಂಶೋಧಕರು, ಅಭಿವೃದ್ಧಿ ಇಲಾಖೆಗಳು, ಸಂಸ್ಕರಣಾ ಘಟಕಗಳು ಇವೆಲ್ಲದರ ಮಾಹಿತಿ ಒಂದೆಡೆ ಸಿಗುತ್ತದೆ.
  • ಕೃಷಿಕ/ಬಳಕೆದಾರ ತನ್ನ ಗೇರು ತೋಟದ ಛಾಯಾಚಿತ್ರ ಹಾಗೂ ವೀಡಿಯೋಗಳನ್ನು ‘ಕೃಷಿ’ ವಿಭಾಗದಲ್ಲಿರುವ ಉಪವಿಭಾಗ ‘ನನ್ನ ಗೇರು ಬೆಳೆ’ ಯಡಿಯಲ್ಲಿ ಸಂಗ್ರಹಿಸಿಡಬಹುದು. ಆಯಾ ತೋಟದ ಖರ್ಚು-ವೆಚ್ಚ ಹಾಗೂ ತನ್ನ ಅನುಭವಗಳನ್ನು ಇಲ್ಲಿ ಸುಲಭವಾಗಿ ದಾಖಲಿಸಲು ಸಾಧ್ಯ.
  • ಈ ಆಪ್ ಮೂಲಕ ಆಯಾ ರಾಜ್ಯದಲ್ಲಿರುವ ಸಂಶೋಧನಾ ಕೇಂದ್ರಗಳಲ್ಲಿ ನಿಮಗೆ ಬೇಕಾದ ಗೇರು ಕಸಿಗಿಡಗಳನ್ನು ಬುಕ್ ಮಾಡಬಹುದು.
  • ಇಲ್ಲಿರುವ ‘ಮಾರುಕಟ್ಟೆ ಮಾಹಿತಿ’ ವಿಭಾಗದಲ್ಲಿ ನೀವು ಗೇರು ಉತ್ಪನ್ನಗಳನ್ನು ಕೊಡು/ಕೊಳ್ಳುವುದು ಸಾಧ್ಯ.
  • ಈ ಆಪ್ ನ್ನು ಗೇರು ಬೆಳೆಯುವ 10 ರಾಜ್ಯಗಳಿಗೆ – ಗುಜರಾತ್, ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಛತ್ತೀಸ್ ಘಡ, ಒರಿಸ್ಸ, ಪಶ್ಚಿಮ ಬಂಗಾಳ ಹಾಗೂ ಮೇಘಾಲಯ- ಅನುಕೂಲವಾಗುವಂತೆ ರೂಪಿಸಲಾಗಿದೆ.
  • ಹಿಂದಿ, ಆಂಗ್ಲ, ಕನ್ನಡ, ಮರಾಠಿ, ಗುಜರಾತಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಗಾರೋ ಹಾಗೂ ಬೆಂಗಾಲಿ – ಹೀಗೆ 11 ಭಾಷೆಗಳಲ್ಲಿ ಪ್ರತ್ಯೇಕವಾಗಿ ಮಾಹಿತಿ ಲಭ್ಯ. ಒಂದು ರಾಜ್ಯಕ್ಕೆ ಎರಡು ಭಾಷೆ – ಇಂಗ್ಲೀಷ್ ಮತ್ತು ಅಲ್ಲಿನ ಸ್ಥಳೀಯ ಭಾಷೆ.
  • ಕೃಷಿಕ/ಬಳಕೆದಾರ ‘ತಜ್ಜರನ್ನು ಕೇಳಿ’ ವಿಭಾಗದ ಮೂಲಕ ಬೇಕಾದ ಸಂಪನ್ಮೂಲ ವ್ಯಕ್ತಿಗಳನ್ನು ಸಂಪರ್ಕಿಸಲು ಸಾಧ್ಯ.
  • ‘ಚರ್ಚಾ ಕೋಣೆ’ ಯ ಮೂಲಕ ಆಯಾ ಸಮಯದಲ್ಲಿ ಆಪ್ ಬಳಸುತ್ತಿರುವ ಬಳಕೆದಾರರೊಡನೆ ಸಂವಹನ ನಡೆಸಬಹುದು.
  • ಅಲ್ಲಲ್ಲಿ ಲಭ್ಯವಿರುವ ಇ-ಸ್ಪೀಕ್ ಗುಂಡಿಯನ್ನು ಒತ್ತಿದರೆ, ಅಲ್ಲಿರುವ ಬರಹಗಳ ಧ್ವನಿರೂಪವನ್ನು ಆಪ್ ಓದುತ್ತದೆ
  • ಈ ಕಿರುತಂತ್ರಾಂಶ ಬಳಸಲು ಅಂತರ್ಜಾಲ ಸಂಪರ್ಕ ಅತೀ ಅಗತ್ಯ

ಈ ಆಪ್ ನ ಪರಿಕಲ್ಪನೆ, ವಿನ್ಯಾಸ, ಅಭಿವೃದ್ಧಿಯನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನ ಹಿರಿಯ ವಿಜ್ಞಾನಿ ಡಾ. ಮೋಹನ್ ತಲಕಾಲುಕೊಪ್ಪ ಮತ್ತು ಅವರ ತಂಡ ಮಾಡಿದೆ. ಇದಕ್ಕೆ ತಾಂತ್ರಿಕ ಮಾಹಿತಿಯನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು ಹಾಗೂ ಅಖಿಲ ಭಾರತ ಸಮನ್ವಿತ ಗೇರು ಸಂಶೋಧನಾ ಪ್ರಾಯೋಜನೆಯ ಕೇಂದ್ರಗಳು ಒದಗಿಸಿವೆ. ಇದಕ್ಕೆ ಆರ್ಥಿಕ ನೆರವನ್ನು ತೋಟಗಾರಿಕೆಯ ಸಮಗ್ರ ಅಭಿವೃದ್ಧಿ ಮಿಷನ್, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ನವದೆಹಲಿ ಮತ್ತು ಗೇರು ಮತ್ತು ಕೊಕೊ ಅಭಿವೃದ್ಧಿ ನಿರ್ದೇಶನಾಲಯ, ಕೊಚ್ಚಿನ್ ನೀಡಿವೆ.

ಸಂಪರ್ಕ: ಡಾ. ಮೋಹನ್ ತಲಕಾಲುಕೊಪ್ಪ , 9902273468 , mohangs2007@gmail.com

ಆಪಿನ ಲಿಂಕ್ ಇಲ್ಲಿದೆ:    https://play.google.com/store/apps/details?id=com.cashew.icar&hl=en_IN

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

6 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

20 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

20 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago