ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನಿಂದ “ಕ್ಯಾಶ್ಯೂ ಇಂಡಿಯಾ” (Cashew India) ಆಪ್ ನ್ನು ಗೇರು ಕೃಷಿಕರು ಹಾಗೂ ಗೇರಿಗೆ ಸಂಬಂಧಿಸಿದ ಎಲ್ಲರಿಗಾಗಿ ಅಭಿವೃದ್ಧಿಗೊಳಿಸಲಾಗಿದೆ.
ಗೂಗಲ್ ಪ್ಲೇಸ್ಟೋರಿನಲ್ಲಿ ಲಭ್ಯವಿರುವ ಇದು ಕೃಷಿ ಆಸಕ್ತರೆಲ್ಲರೂ ನೋಡಲೇಬೇಕಾದ ಆಪ್. ಬೆಳೆ ಸಂಬಂಧೀ ಆಪ್ಸ್ ತಯಾರಿಕೆಯಲ್ಲಿ ಇದೊಂದು ಮಾದರಿಯಾಗಬಲ್ಲ ವಿನೂತನ ಹೆಜ್ಜೆ. ‘ಕೃಷಿಕಸ್ನೇಹಿ’, ‘ಸಮಗ್ರ ಮಾಹಿತಿ’, ‘ಸುಲಭ ಬಳಕೆ’ ‘ದೇಶವ್ಯಾಪಿ‘ ಮಾನದಂಡಗಳನ್ನಿಟ್ಟುಕೊಂಡು ರೂಪಿಸಿದ ಈ ‘ಕ್ಯಾಶ್ಯೂ ಇಂಡಿಯಾ’ ಆಪ್ ವೈಶಿಷ್ಟ್ಯಗಳಿಲ್ಲಿವೆ.
ಏನಿದೆ ವಿಶೇಷತೆಗಳು ?:
ಈ ಆಪ್ ನ ಪರಿಕಲ್ಪನೆ, ವಿನ್ಯಾಸ, ಅಭಿವೃದ್ಧಿಯನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನ ಹಿರಿಯ ವಿಜ್ಞಾನಿ ಡಾ. ಮೋಹನ್ ತಲಕಾಲುಕೊಪ್ಪ ಮತ್ತು ಅವರ ತಂಡ ಮಾಡಿದೆ. ಇದಕ್ಕೆ ತಾಂತ್ರಿಕ ಮಾಹಿತಿಯನ್ನು ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರು ಹಾಗೂ ಅಖಿಲ ಭಾರತ ಸಮನ್ವಿತ ಗೇರು ಸಂಶೋಧನಾ ಪ್ರಾಯೋಜನೆಯ ಕೇಂದ್ರಗಳು ಒದಗಿಸಿವೆ. ಇದಕ್ಕೆ ಆರ್ಥಿಕ ನೆರವನ್ನು ತೋಟಗಾರಿಕೆಯ ಸಮಗ್ರ ಅಭಿವೃದ್ಧಿ ಮಿಷನ್, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ನವದೆಹಲಿ ಮತ್ತು ಗೇರು ಮತ್ತು ಕೊಕೊ ಅಭಿವೃದ್ಧಿ ನಿರ್ದೇಶನಾಲಯ, ಕೊಚ್ಚಿನ್ ನೀಡಿವೆ.
ಸಂಪರ್ಕ: ಡಾ. ಮೋಹನ್ ತಲಕಾಲುಕೊಪ್ಪ , 9902273468 , mohangs2007@gmail.com
ಆಪಿನ ಲಿಂಕ್ ಇಲ್ಲಿದೆ: https://play.google.com/store/apps/details?id=com.cashew.icar&hl=en_IN
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…