ಬೆಳ್ಳಾರೆ:ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ಕ್ರೀಡಾಳುಗಳು ಕಾಣಬೇಕು. ಇಂದು ಸೋತವರು ನಾಳೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಳ್ಳಬಹುದು. ಸೋತರೆ ಮತ್ತೊಮ್ಮೆ ಛಲದಿಂದ ಆಡಿ ವಿಜಯಲಕ್ಷ್ಮೀಯನ್ನು ಒಲಿಸಿಕೊಳ್ಳಬಹುದು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಾಳಪ್ಪ.ಕೆ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆಳ್ಳಾರೆ ಕೆಪಿಎಸ್ ಶಾಲೆಯ ಪಿಯುಸಿ ವಿಭಾಗದ ಆಯೋಜನೆಯೊಂದಿಗೆ ನಡೆದ ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಹಸೀನಾ ಬಾನು ಸೋಲು ಗೆಲುವನ್ನು ಪಡೆಯಲು ಛಲ ಹುಟ್ಟಿಸಬೇಕು. ಗೆದ್ದವರು ಅಹಂಕಾರ ಪಡದೆ ಮತ್ತಷ್ಟು ಮೇಲೇರಲು ಶ್ರಮಿಸಬೇಕು ಎಂದರು. ವೇದಿಕೆಯಲ್ಲಿ ತಾಲೂಕಿನ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
ಹಿರಿಯ ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…