ಬೆಳ್ಳಾರೆ:ಕ್ರೀಡೆಯನ್ನು ಸ್ಪರ್ಧಾತ್ಮಕವಾಗಿ ಕ್ರೀಡಾಳುಗಳು ಕಾಣಬೇಕು. ಇಂದು ಸೋತವರು ನಾಳೆ ಅಂತರಾಷ್ಟ್ರೀಯ ಮಟ್ಟದಲ್ಲಿ ಆಡುವ ಅವಕಾಶ ಗಿಟ್ಟಿಸಿಕೊಳ್ಳಬಹುದು. ಸೋತರೆ ಮತ್ತೊಮ್ಮೆ ಛಲದಿಂದ ಆಡಿ ವಿಜಯಲಕ್ಷ್ಮೀಯನ್ನು ಒಲಿಸಿಕೊಳ್ಳಬಹುದು ಎಂದು ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಾಳಪ್ಪ.ಕೆ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೆಳ್ಳಾರೆ ಕೆಪಿಎಸ್ ಶಾಲೆಯ ಪಿಯುಸಿ ವಿಭಾಗದ ಆಯೋಜನೆಯೊಂದಿಗೆ ನಡೆದ ತಾಲೂಕು ಮಟ್ಟದ ಬಾಲಕ-ಬಾಲಕಿಯರ ತ್ರೋಬಾಲ್ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲೆ ಹಸೀನಾ ಬಾನು ಸೋಲು ಗೆಲುವನ್ನು ಪಡೆಯಲು ಛಲ ಹುಟ್ಟಿಸಬೇಕು. ಗೆದ್ದವರು ಅಹಂಕಾರ ಪಡದೆ ಮತ್ತಷ್ಟು ಮೇಲೇರಲು ಶ್ರಮಿಸಬೇಕು ಎಂದರು. ವೇದಿಕೆಯಲ್ಲಿ ತಾಲೂಕಿನ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
ಹಿರಿಯ ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…