Advertisement
ಯಕ್ಷಗಾನ : ಮಾತು-ಮಸೆತ

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

 

(ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ – ಎನ್ನುವ ಸಂದರ್ಭ)

“… ಶಾರದಾ…. ನಿನ್ನ ಪಟ್ಟಾಭಿಷೇಕಕ್ಕೆ ಕಾಮ ಬರಕೂಡದು. ಕಾಮದ ನಂತರ ಕ್ರೋಧ. ಕ್ರೋಧ ಬಂದಾಗ ಬುದ್ಧಿ ನಷ್ಟ. ಬುದ್ಧಿ ನಷ್ಟವಾದರೆ ಸರ್ವನಾಶ. ಈ ಕಾಮಕ್ಕೆ ಗಂಡು ಹೆಣ್ಣನ್ನು ಒಂದುಗೂಡಿಸುವ ಕೆಲಸ. ನೀನು ಕಾಳನ್ನು ನೋಡಿರಬಹುದು. ಅದರಲ್ಲಿ ಹೊಟ್ಟು ಇದ್ದರೆ ಪ್ರಯೋಜನವಿಲ್ಲ. ಈ ಹೊಟ್ಟಿಗೂ ಕಾಳಿಗೂ ಸಂಬಂಧ ಕಲ್ಪಿಸುವ ಯಾವ ಸ್ನಿಗ್ಧ ಪದಾರ್ಥ ಇದೆಯೋ ಅದಕ್ಕೆ ‘ಸ್ನೇಹ’ ಅಂತ ಹೆಸರು. ಇದು ಕಾಮದ ಸೂಕ್ಷ್ಮ ಸ್ವರೂಪ. ಆ ಸ್ನಿಗ್ಧ ಪದಾರ್ಥ ಹುರಿಯುವುದರಿಂದಲೋ, ಸುಡುವುದರಿಂದಲೋ ನಷ್ಟವಾದರೆ ಬಿತ್ತಿದರೆ ಬೆಳೆ ಬರುವುದಿಲ್ಲ ಎಂಬ ನ್ಯಾಯೇಣ ಕಾಮನ ಸಂಪರ್ಕವೂ ಈ ವಿದ್ಯಾಪೀಠಕ್ಕೆ ಬರಕೂಡದು. ಆದ್ದರಿಂದ ಅವನು ತಿರಸ್ಕರಣೀಯ.
ಮತ್ತೊಬ್ಬನಿದ್ದಾನೆ. ತತ್ವತಃ ನಾವೆಲ್ಲಾ ಒಂದೇ. ‘ಸತ್ಯಂ ಶಿವಂ ಸುಂದರಂ’. ಅವನೀಗ ರುದ್ರನಾಗಿ ಪ್ರಪಂಚವನ್ನೇ ನಾಶ ಮಾಡುವಂತಹ ಒಂದು ಕರ್ತವ್ಯ ವಹಿಸಿಕೊಂಡಿದ್ದಾನೆ. ‘ಶಿವ’ನೆಂಬ ಅರ್ಥದಲ್ಲೂ ಅವನಿಗೆ ಜ್ಞಾನದೇವತೆಯ ಅವಶ್ಯಕತೆಯಿಲ್ಲ. ಪ್ರಾಪಂಚಿಕವಾಗಿ ರುದ್ರನಾಗಿದ್ದ ಅವನಿಗೆ ಯಾಕೆ ವಿದ್ಯಾಪೀಠ? ತಮೋಗುಣದಿಂದ ಎಲ್ಲವನ್ನೂ ನಾಶಮಾಡುವವನು. ಹಾಗಾಗಿ ತಮೋಗುಣ ಅಧಿಷ್ಠಾನನೆನಿಸಿದ ಶಂಕರನಿಗೂ ಆಮಂತ್ರಣವಿಲ್ಲ. ಕಾಮನಿಗೂ ಆಮಂತ್ರಣವಿಲ್ಲ.
ನರಕಕ್ಕೆ ಮೂರು ಹೆಬ್ಬಾಗಿಲು. ಕಾಮ, ಕ್ರೋಧ, ಲೋಭ. ಈ ಕಾಮ ಕ್ರೋಧಗಳ ವ್ಯತಿರಿಕ್ತ ಸ್ವಭಾವಗಳ ಸ್ವರೂಪವೇ ರುದ್ರ ಮತ್ತು ಕಾಮ. ಇವರನ್ನು ಬಿಟ್ಟು ಮಿಕ್ಕವರಿಗೆಲ್ಲಾ ಆಮಂತ್ರಣ ಕೊಟ್ಟಿದ್ದೇನೆ..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

8 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

8 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

12 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

2 days ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago