ಯಕ್ಷಗಾನ : ಮಾತು-ಮಸೆತ

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

Advertisement
Advertisement

 

(ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ – ಎನ್ನುವ ಸಂದರ್ಭ)

“… ಶಾರದಾ…. ನಿನ್ನ ಪಟ್ಟಾಭಿಷೇಕಕ್ಕೆ ಕಾಮ ಬರಕೂಡದು. ಕಾಮದ ನಂತರ ಕ್ರೋಧ. ಕ್ರೋಧ ಬಂದಾಗ ಬುದ್ಧಿ ನಷ್ಟ. ಬುದ್ಧಿ ನಷ್ಟವಾದರೆ ಸರ್ವನಾಶ. ಈ ಕಾಮಕ್ಕೆ ಗಂಡು ಹೆಣ್ಣನ್ನು ಒಂದುಗೂಡಿಸುವ ಕೆಲಸ. ನೀನು ಕಾಳನ್ನು ನೋಡಿರಬಹುದು. ಅದರಲ್ಲಿ ಹೊಟ್ಟು ಇದ್ದರೆ ಪ್ರಯೋಜನವಿಲ್ಲ. ಈ ಹೊಟ್ಟಿಗೂ ಕಾಳಿಗೂ ಸಂಬಂಧ ಕಲ್ಪಿಸುವ ಯಾವ ಸ್ನಿಗ್ಧ ಪದಾರ್ಥ ಇದೆಯೋ ಅದಕ್ಕೆ ‘ಸ್ನೇಹ’ ಅಂತ ಹೆಸರು. ಇದು ಕಾಮದ ಸೂಕ್ಷ್ಮ ಸ್ವರೂಪ. ಆ ಸ್ನಿಗ್ಧ ಪದಾರ್ಥ ಹುರಿಯುವುದರಿಂದಲೋ, ಸುಡುವುದರಿಂದಲೋ ನಷ್ಟವಾದರೆ ಬಿತ್ತಿದರೆ ಬೆಳೆ ಬರುವುದಿಲ್ಲ ಎಂಬ ನ್ಯಾಯೇಣ ಕಾಮನ ಸಂಪರ್ಕವೂ ಈ ವಿದ್ಯಾಪೀಠಕ್ಕೆ ಬರಕೂಡದು. ಆದ್ದರಿಂದ ಅವನು ತಿರಸ್ಕರಣೀಯ.
ಮತ್ತೊಬ್ಬನಿದ್ದಾನೆ. ತತ್ವತಃ ನಾವೆಲ್ಲಾ ಒಂದೇ. ‘ಸತ್ಯಂ ಶಿವಂ ಸುಂದರಂ’. ಅವನೀಗ ರುದ್ರನಾಗಿ ಪ್ರಪಂಚವನ್ನೇ ನಾಶ ಮಾಡುವಂತಹ ಒಂದು ಕರ್ತವ್ಯ ವಹಿಸಿಕೊಂಡಿದ್ದಾನೆ. ‘ಶಿವ’ನೆಂಬ ಅರ್ಥದಲ್ಲೂ ಅವನಿಗೆ ಜ್ಞಾನದೇವತೆಯ ಅವಶ್ಯಕತೆಯಿಲ್ಲ. ಪ್ರಾಪಂಚಿಕವಾಗಿ ರುದ್ರನಾಗಿದ್ದ ಅವನಿಗೆ ಯಾಕೆ ವಿದ್ಯಾಪೀಠ? ತಮೋಗುಣದಿಂದ ಎಲ್ಲವನ್ನೂ ನಾಶಮಾಡುವವನು. ಹಾಗಾಗಿ ತಮೋಗುಣ ಅಧಿಷ್ಠಾನನೆನಿಸಿದ ಶಂಕರನಿಗೂ ಆಮಂತ್ರಣವಿಲ್ಲ. ಕಾಮನಿಗೂ ಆಮಂತ್ರಣವಿಲ್ಲ.
ನರಕಕ್ಕೆ ಮೂರು ಹೆಬ್ಬಾಗಿಲು. ಕಾಮ, ಕ್ರೋಧ, ಲೋಭ. ಈ ಕಾಮ ಕ್ರೋಧಗಳ ವ್ಯತಿರಿಕ್ತ ಸ್ವಭಾವಗಳ ಸ್ವರೂಪವೇ ರುದ್ರ ಮತ್ತು ಕಾಮ. ಇವರನ್ನು ಬಿಟ್ಟು ಮಿಕ್ಕವರಿಗೆಲ್ಲಾ ಆಮಂತ್ರಣ ಕೊಟ್ಟಿದ್ದೇನೆ..”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

4 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

9 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

17 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

17 hours ago