Advertisement
ಯಕ್ಷಗಾನ : ಮಾತು-ಮಸೆತ

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

 

(ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ – ಎನ್ನುವ ಸಂದರ್ಭ)

“… ಶಾರದಾ…. ನಿನ್ನ ಪಟ್ಟಾಭಿಷೇಕಕ್ಕೆ ಕಾಮ ಬರಕೂಡದು. ಕಾಮದ ನಂತರ ಕ್ರೋಧ. ಕ್ರೋಧ ಬಂದಾಗ ಬುದ್ಧಿ ನಷ್ಟ. ಬುದ್ಧಿ ನಷ್ಟವಾದರೆ ಸರ್ವನಾಶ. ಈ ಕಾಮಕ್ಕೆ ಗಂಡು ಹೆಣ್ಣನ್ನು ಒಂದುಗೂಡಿಸುವ ಕೆಲಸ. ನೀನು ಕಾಳನ್ನು ನೋಡಿರಬಹುದು. ಅದರಲ್ಲಿ ಹೊಟ್ಟು ಇದ್ದರೆ ಪ್ರಯೋಜನವಿಲ್ಲ. ಈ ಹೊಟ್ಟಿಗೂ ಕಾಳಿಗೂ ಸಂಬಂಧ ಕಲ್ಪಿಸುವ ಯಾವ ಸ್ನಿಗ್ಧ ಪದಾರ್ಥ ಇದೆಯೋ ಅದಕ್ಕೆ ‘ಸ್ನೇಹ’ ಅಂತ ಹೆಸರು. ಇದು ಕಾಮದ ಸೂಕ್ಷ್ಮ ಸ್ವರೂಪ. ಆ ಸ್ನಿಗ್ಧ ಪದಾರ್ಥ ಹುರಿಯುವುದರಿಂದಲೋ, ಸುಡುವುದರಿಂದಲೋ ನಷ್ಟವಾದರೆ ಬಿತ್ತಿದರೆ ಬೆಳೆ ಬರುವುದಿಲ್ಲ ಎಂಬ ನ್ಯಾಯೇಣ ಕಾಮನ ಸಂಪರ್ಕವೂ ಈ ವಿದ್ಯಾಪೀಠಕ್ಕೆ ಬರಕೂಡದು. ಆದ್ದರಿಂದ ಅವನು ತಿರಸ್ಕರಣೀಯ.
ಮತ್ತೊಬ್ಬನಿದ್ದಾನೆ. ತತ್ವತಃ ನಾವೆಲ್ಲಾ ಒಂದೇ. ‘ಸತ್ಯಂ ಶಿವಂ ಸುಂದರಂ’. ಅವನೀಗ ರುದ್ರನಾಗಿ ಪ್ರಪಂಚವನ್ನೇ ನಾಶ ಮಾಡುವಂತಹ ಒಂದು ಕರ್ತವ್ಯ ವಹಿಸಿಕೊಂಡಿದ್ದಾನೆ. ‘ಶಿವ’ನೆಂಬ ಅರ್ಥದಲ್ಲೂ ಅವನಿಗೆ ಜ್ಞಾನದೇವತೆಯ ಅವಶ್ಯಕತೆಯಿಲ್ಲ. ಪ್ರಾಪಂಚಿಕವಾಗಿ ರುದ್ರನಾಗಿದ್ದ ಅವನಿಗೆ ಯಾಕೆ ವಿದ್ಯಾಪೀಠ? ತಮೋಗುಣದಿಂದ ಎಲ್ಲವನ್ನೂ ನಾಶಮಾಡುವವನು. ಹಾಗಾಗಿ ತಮೋಗುಣ ಅಧಿಷ್ಠಾನನೆನಿಸಿದ ಶಂಕರನಿಗೂ ಆಮಂತ್ರಣವಿಲ್ಲ. ಕಾಮನಿಗೂ ಆಮಂತ್ರಣವಿಲ್ಲ.
ನರಕಕ್ಕೆ ಮೂರು ಹೆಬ್ಬಾಗಿಲು. ಕಾಮ, ಕ್ರೋಧ, ಲೋಭ. ಈ ಕಾಮ ಕ್ರೋಧಗಳ ವ್ಯತಿರಿಕ್ತ ಸ್ವಭಾವಗಳ ಸ್ವರೂಪವೇ ರುದ್ರ ಮತ್ತು ಕಾಮ. ಇವರನ್ನು ಬಿಟ್ಟು ಮಿಕ್ಕವರಿಗೆಲ್ಲಾ ಆಮಂತ್ರಣ ಕೊಟ್ಟಿದ್ದೇನೆ..”

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

11 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

17 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago