Advertisement
ಯಕ್ಷಗಾನ : ಮಾತು-ಮಸೆತ

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

Advertisement

 

(ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ – ಎನ್ನುವ ಸಂದರ್ಭ)

“… ಶಾರದಾ…. ನಿನ್ನ ಪಟ್ಟಾಭಿಷೇಕಕ್ಕೆ ಕಾಮ ಬರಕೂಡದು. ಕಾಮದ ನಂತರ ಕ್ರೋಧ. ಕ್ರೋಧ ಬಂದಾಗ ಬುದ್ಧಿ ನಷ್ಟ. ಬುದ್ಧಿ ನಷ್ಟವಾದರೆ ಸರ್ವನಾಶ. ಈ ಕಾಮಕ್ಕೆ ಗಂಡು ಹೆಣ್ಣನ್ನು ಒಂದುಗೂಡಿಸುವ ಕೆಲಸ. ನೀನು ಕಾಳನ್ನು ನೋಡಿರಬಹುದು. ಅದರಲ್ಲಿ ಹೊಟ್ಟು ಇದ್ದರೆ ಪ್ರಯೋಜನವಿಲ್ಲ. ಈ ಹೊಟ್ಟಿಗೂ ಕಾಳಿಗೂ ಸಂಬಂಧ ಕಲ್ಪಿಸುವ ಯಾವ ಸ್ನಿಗ್ಧ ಪದಾರ್ಥ ಇದೆಯೋ ಅದಕ್ಕೆ ‘ಸ್ನೇಹ’ ಅಂತ ಹೆಸರು. ಇದು ಕಾಮದ ಸೂಕ್ಷ್ಮ ಸ್ವರೂಪ. ಆ ಸ್ನಿಗ್ಧ ಪದಾರ್ಥ ಹುರಿಯುವುದರಿಂದಲೋ, ಸುಡುವುದರಿಂದಲೋ ನಷ್ಟವಾದರೆ ಬಿತ್ತಿದರೆ ಬೆಳೆ ಬರುವುದಿಲ್ಲ ಎಂಬ ನ್ಯಾಯೇಣ ಕಾಮನ ಸಂಪರ್ಕವೂ ಈ ವಿದ್ಯಾಪೀಠಕ್ಕೆ ಬರಕೂಡದು. ಆದ್ದರಿಂದ ಅವನು ತಿರಸ್ಕರಣೀಯ.
ಮತ್ತೊಬ್ಬನಿದ್ದಾನೆ. ತತ್ವತಃ ನಾವೆಲ್ಲಾ ಒಂದೇ. ‘ಸತ್ಯಂ ಶಿವಂ ಸುಂದರಂ’. ಅವನೀಗ ರುದ್ರನಾಗಿ ಪ್ರಪಂಚವನ್ನೇ ನಾಶ ಮಾಡುವಂತಹ ಒಂದು ಕರ್ತವ್ಯ ವಹಿಸಿಕೊಂಡಿದ್ದಾನೆ. ‘ಶಿವ’ನೆಂಬ ಅರ್ಥದಲ್ಲೂ ಅವನಿಗೆ ಜ್ಞಾನದೇವತೆಯ ಅವಶ್ಯಕತೆಯಿಲ್ಲ. ಪ್ರಾಪಂಚಿಕವಾಗಿ ರುದ್ರನಾಗಿದ್ದ ಅವನಿಗೆ ಯಾಕೆ ವಿದ್ಯಾಪೀಠ? ತಮೋಗುಣದಿಂದ ಎಲ್ಲವನ್ನೂ ನಾಶಮಾಡುವವನು. ಹಾಗಾಗಿ ತಮೋಗುಣ ಅಧಿಷ್ಠಾನನೆನಿಸಿದ ಶಂಕರನಿಗೂ ಆಮಂತ್ರಣವಿಲ್ಲ. ಕಾಮನಿಗೂ ಆಮಂತ್ರಣವಿಲ್ಲ.
ನರಕಕ್ಕೆ ಮೂರು ಹೆಬ್ಬಾಗಿಲು. ಕಾಮ, ಕ್ರೋಧ, ಲೋಭ. ಈ ಕಾಮ ಕ್ರೋಧಗಳ ವ್ಯತಿರಿಕ್ತ ಸ್ವಭಾವಗಳ ಸ್ವರೂಪವೇ ರುದ್ರ ಮತ್ತು ಕಾಮ. ಇವರನ್ನು ಬಿಟ್ಟು ಮಿಕ್ಕವರಿಗೆಲ್ಲಾ ಆಮಂತ್ರಣ ಕೊಟ್ಟಿದ್ದೇನೆ..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

14 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

21 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

21 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

2 days ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

2 days ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 days ago