Advertisement
ಯಕ್ಷಗಾನ : ಮಾತು-ಮಸೆತ

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

 

Advertisement

(ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ – ಎನ್ನುವ ಸಂದರ್ಭ)

“… ಶಾರದಾ…. ನಿನ್ನ ಪಟ್ಟಾಭಿಷೇಕಕ್ಕೆ ಕಾಮ ಬರಕೂಡದು. ಕಾಮದ ನಂತರ ಕ್ರೋಧ. ಕ್ರೋಧ ಬಂದಾಗ ಬುದ್ಧಿ ನಷ್ಟ. ಬುದ್ಧಿ ನಷ್ಟವಾದರೆ ಸರ್ವನಾಶ. ಈ ಕಾಮಕ್ಕೆ ಗಂಡು ಹೆಣ್ಣನ್ನು ಒಂದುಗೂಡಿಸುವ ಕೆಲಸ. ನೀನು ಕಾಳನ್ನು ನೋಡಿರಬಹುದು. ಅದರಲ್ಲಿ ಹೊಟ್ಟು ಇದ್ದರೆ ಪ್ರಯೋಜನವಿಲ್ಲ. ಈ ಹೊಟ್ಟಿಗೂ ಕಾಳಿಗೂ ಸಂಬಂಧ ಕಲ್ಪಿಸುವ ಯಾವ ಸ್ನಿಗ್ಧ ಪದಾರ್ಥ ಇದೆಯೋ ಅದಕ್ಕೆ ‘ಸ್ನೇಹ’ ಅಂತ ಹೆಸರು. ಇದು ಕಾಮದ ಸೂಕ್ಷ್ಮ ಸ್ವರೂಪ. ಆ ಸ್ನಿಗ್ಧ ಪದಾರ್ಥ ಹುರಿಯುವುದರಿಂದಲೋ, ಸುಡುವುದರಿಂದಲೋ ನಷ್ಟವಾದರೆ ಬಿತ್ತಿದರೆ ಬೆಳೆ ಬರುವುದಿಲ್ಲ ಎಂಬ ನ್ಯಾಯೇಣ ಕಾಮನ ಸಂಪರ್ಕವೂ ಈ ವಿದ್ಯಾಪೀಠಕ್ಕೆ ಬರಕೂಡದು. ಆದ್ದರಿಂದ ಅವನು ತಿರಸ್ಕರಣೀಯ.
ಮತ್ತೊಬ್ಬನಿದ್ದಾನೆ. ತತ್ವತಃ ನಾವೆಲ್ಲಾ ಒಂದೇ. ‘ಸತ್ಯಂ ಶಿವಂ ಸುಂದರಂ’. ಅವನೀಗ ರುದ್ರನಾಗಿ ಪ್ರಪಂಚವನ್ನೇ ನಾಶ ಮಾಡುವಂತಹ ಒಂದು ಕರ್ತವ್ಯ ವಹಿಸಿಕೊಂಡಿದ್ದಾನೆ. ‘ಶಿವ’ನೆಂಬ ಅರ್ಥದಲ್ಲೂ ಅವನಿಗೆ ಜ್ಞಾನದೇವತೆಯ ಅವಶ್ಯಕತೆಯಿಲ್ಲ. ಪ್ರಾಪಂಚಿಕವಾಗಿ ರುದ್ರನಾಗಿದ್ದ ಅವನಿಗೆ ಯಾಕೆ ವಿದ್ಯಾಪೀಠ? ತಮೋಗುಣದಿಂದ ಎಲ್ಲವನ್ನೂ ನಾಶಮಾಡುವವನು. ಹಾಗಾಗಿ ತಮೋಗುಣ ಅಧಿಷ್ಠಾನನೆನಿಸಿದ ಶಂಕರನಿಗೂ ಆಮಂತ್ರಣವಿಲ್ಲ. ಕಾಮನಿಗೂ ಆಮಂತ್ರಣವಿಲ್ಲ.
ನರಕಕ್ಕೆ ಮೂರು ಹೆಬ್ಬಾಗಿಲು. ಕಾಮ, ಕ್ರೋಧ, ಲೋಭ. ಈ ಕಾಮ ಕ್ರೋಧಗಳ ವ್ಯತಿರಿಕ್ತ ಸ್ವಭಾವಗಳ ಸ್ವರೂಪವೇ ರುದ್ರ ಮತ್ತು ಕಾಮ. ಇವರನ್ನು ಬಿಟ್ಟು ಮಿಕ್ಕವರಿಗೆಲ್ಲಾ ಆಮಂತ್ರಣ ಕೊಟ್ಟಿದ್ದೇನೆ..”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಮಳೆ ಕೊರತೆ ಆತಂಕ – ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸಿ – ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…

60 minutes ago

ಮಲೆನಾಡು ಮತ್ತೆ ಮಳೆಯಲ್ಲಿ ಮಿಂದೆದ್ದಿದೆ…! ಮಳೆ ಬಂದರೆ ಶಿರಾಡಿ ಹೀಗಿರುತ್ತೆ…?

ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…

2 hours ago

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ

ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…

7 hours ago

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

3 days ago