Advertisement
ಯಕ್ಷಗಾನ : ಮಾತು-ಮಸೆತ

ಕ್ರೋಧ ಬಂದಾಗ ಬುದ್ಧಿ ನಷ್ಟ, ಬುದ್ಧಿ ನಷ್ಟವಾದರೆ ಸರ್ವನಾಶ……

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಬ್ರಹ್ಮ’
ಪ್ರಸಂಗ : ಬ್ರಹ್ಮಕಪಾಲ

 

(ಶಾರದೆಗೆ ವಿದ್ಯಾಧಿದೇವತೆಯ ಸ್ಥಾನವನ್ನು ಕೊಡಲುದ್ಯುಕ್ತನಾದ ಬ್ರಹ್ಮನು ಮನ್ಮಥ ಮತ್ತು ಈಶ್ವರನಿಗೆ ಪಟ್ಟಾಭಿಷೇಕ ಸಮಾರಂಭಕ್ಕೆ ಆಮಂತ್ರಣವಿಲ್ಲ – ಎನ್ನುವ ಸಂದರ್ಭ)

“… ಶಾರದಾ…. ನಿನ್ನ ಪಟ್ಟಾಭಿಷೇಕಕ್ಕೆ ಕಾಮ ಬರಕೂಡದು. ಕಾಮದ ನಂತರ ಕ್ರೋಧ. ಕ್ರೋಧ ಬಂದಾಗ ಬುದ್ಧಿ ನಷ್ಟ. ಬುದ್ಧಿ ನಷ್ಟವಾದರೆ ಸರ್ವನಾಶ. ಈ ಕಾಮಕ್ಕೆ ಗಂಡು ಹೆಣ್ಣನ್ನು ಒಂದುಗೂಡಿಸುವ ಕೆಲಸ. ನೀನು ಕಾಳನ್ನು ನೋಡಿರಬಹುದು. ಅದರಲ್ಲಿ ಹೊಟ್ಟು ಇದ್ದರೆ ಪ್ರಯೋಜನವಿಲ್ಲ. ಈ ಹೊಟ್ಟಿಗೂ ಕಾಳಿಗೂ ಸಂಬಂಧ ಕಲ್ಪಿಸುವ ಯಾವ ಸ್ನಿಗ್ಧ ಪದಾರ್ಥ ಇದೆಯೋ ಅದಕ್ಕೆ ‘ಸ್ನೇಹ’ ಅಂತ ಹೆಸರು. ಇದು ಕಾಮದ ಸೂಕ್ಷ್ಮ ಸ್ವರೂಪ. ಆ ಸ್ನಿಗ್ಧ ಪದಾರ್ಥ ಹುರಿಯುವುದರಿಂದಲೋ, ಸುಡುವುದರಿಂದಲೋ ನಷ್ಟವಾದರೆ ಬಿತ್ತಿದರೆ ಬೆಳೆ ಬರುವುದಿಲ್ಲ ಎಂಬ ನ್ಯಾಯೇಣ ಕಾಮನ ಸಂಪರ್ಕವೂ ಈ ವಿದ್ಯಾಪೀಠಕ್ಕೆ ಬರಕೂಡದು. ಆದ್ದರಿಂದ ಅವನು ತಿರಸ್ಕರಣೀಯ.
ಮತ್ತೊಬ್ಬನಿದ್ದಾನೆ. ತತ್ವತಃ ನಾವೆಲ್ಲಾ ಒಂದೇ. ‘ಸತ್ಯಂ ಶಿವಂ ಸುಂದರಂ’. ಅವನೀಗ ರುದ್ರನಾಗಿ ಪ್ರಪಂಚವನ್ನೇ ನಾಶ ಮಾಡುವಂತಹ ಒಂದು ಕರ್ತವ್ಯ ವಹಿಸಿಕೊಂಡಿದ್ದಾನೆ. ‘ಶಿವ’ನೆಂಬ ಅರ್ಥದಲ್ಲೂ ಅವನಿಗೆ ಜ್ಞಾನದೇವತೆಯ ಅವಶ್ಯಕತೆಯಿಲ್ಲ. ಪ್ರಾಪಂಚಿಕವಾಗಿ ರುದ್ರನಾಗಿದ್ದ ಅವನಿಗೆ ಯಾಕೆ ವಿದ್ಯಾಪೀಠ? ತಮೋಗುಣದಿಂದ ಎಲ್ಲವನ್ನೂ ನಾಶಮಾಡುವವನು. ಹಾಗಾಗಿ ತಮೋಗುಣ ಅಧಿಷ್ಠಾನನೆನಿಸಿದ ಶಂಕರನಿಗೂ ಆಮಂತ್ರಣವಿಲ್ಲ. ಕಾಮನಿಗೂ ಆಮಂತ್ರಣವಿಲ್ಲ.
ನರಕಕ್ಕೆ ಮೂರು ಹೆಬ್ಬಾಗಿಲು. ಕಾಮ, ಕ್ರೋಧ, ಲೋಭ. ಈ ಕಾಮ ಕ್ರೋಧಗಳ ವ್ಯತಿರಿಕ್ತ ಸ್ವಭಾವಗಳ ಸ್ವರೂಪವೇ ರುದ್ರ ಮತ್ತು ಕಾಮ. ಇವರನ್ನು ಬಿಟ್ಟು ಮಿಕ್ಕವರಿಗೆಲ್ಲಾ ಆಮಂತ್ರಣ ಕೊಟ್ಟಿದ್ದೇನೆ..”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago