ಕ್ಲೋರಿನ್ ಸೋರಿಕೆ : ಸುಬ್ರಹ್ಮಣ್ಯದ ಕಲ್ಲಪಣೆಯಲ್ಲಿ ಉಸಿರುಗಟ್ಟಿದ ಜನತೆ…!

October 29, 2019
10:31 AM

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.

ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ  ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ  ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.

 

ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು  ಪರಿಶೀಲನೆ ನಡೆಸಿದಾಗ  ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು.  ಈಗ ಜನತೆಯ ಆತಂಕ ದೂರವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ
July 27, 2026
6:33 AM
by: ದ ರೂರಲ್ ಮಿರರ್.ಕಾಂ
ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror