ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.
ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು ಪರಿಶೀಲನೆ ನಡೆಸಿದಾಗ ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು. ಈಗ ಜನತೆಯ ಆತಂಕ ದೂರವಾಗಿದೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…