ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.
ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು ಪರಿಶೀಲನೆ ನಡೆಸಿದಾಗ ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು. ಈಗ ಜನತೆಯ ಆತಂಕ ದೂರವಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…