ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.
ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು ಪರಿಶೀಲನೆ ನಡೆಸಿದಾಗ ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು. ಈಗ ಜನತೆಯ ಆತಂಕ ದೂರವಾಗಿದೆ.
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…