ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.
ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು ಪರಿಶೀಲನೆ ನಡೆಸಿದಾಗ ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು. ಈಗ ಜನತೆಯ ಆತಂಕ ದೂರವಾಗಿದೆ.
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…