ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಜನತೆ ಆತಂಕಕ್ಕೆ ಒಳಗಾದರು. ಉಸಿರುಗಟ್ಟಿ ಮನೆಯಿಂದ ಓಡಿ ಬಂದ ಘಟನೆ ನಡೆದಿದೆ.
ಸೋಮವಾರ ತಡರಾತ್ರಿ ಸುಬ್ರಹ್ಮಣ್ಯ ಕಲ್ಲಪಣೆಯಲ್ಲಿರುವ ಕುಡಿಯುವ ನೀರು ಶುದ್ಧೀಕರಣ ಘಟಕದಿಂದ ಕ್ಲೋರಿನ್ ಸೋರಿಕೆಯಾಗಿ ಉಸಿರುಗಟ್ಟಿಸುವ ವಾಸನೆ ಬಂದಿತ್ತು. ಹೀಗಾಗಿ ಜನತೆ ಆತಂಕಕ್ಕೆ ಒಳಗಾಗಿ ಗ್ಯಾಸ್ ಸೋರಿಕೆಯಾಗಿದೆ ಎಂದು ಮನೆಯಿಂದ ಓಡಿ ಬಂದರು. ವಾಸನೆಗೆ ಸಮೀಪದ ಮನೆಯವರಿಗೆ ಉಸಿರಾಡಲು ಕಷ್ಟವಾಯಿತು.
ಬಳಿಕ ಅಗ್ನಿ ಶಾಮಕ ದಳದವರಿಗೂ ಮಾಹಿತಿ ನೀಡಲಾಯಿತು. ದೇವಸ್ಥಾನದ ಅಧಿಕಾರಿಗಳಿಗೆ, ಪೋಲೀಸರಿಗೆ ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದರು. ಅಗ್ನಿಶಾಮಕದ ದಳದ ಸಿಬಂದಿಗಳು ಪರಿಶೀಲನೆ ನಡೆಸಿದಾಗ ಶುದ್ಧೀಕರಣ ಘಟಕದ ಟ್ಯಾಂಕ್ ನ ಒಳಗಡೆಯಲ್ಲಿ ತುಂಬಿಸಿಟ್ಟಿದ್ದ ಕ್ಲೋರಿನ್ ಸೋರಿಕೆಯಾಗಿರುವುದು ಕಂಡುಬಂತು. ಈಗ ಜನತೆಯ ಆತಂಕ ದೂರವಾಗಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…