ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…
ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ…
ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…
ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ 9535156490