ಸುಳ್ಯ: ಕ್ವಾರಂಟೈನ್ ಉಲ್ಲಂಘನೆ ಆರೋಪದಡಿ ಐದು ಮಂದಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ.
ಜುಲೈ 15 ರಂದು ಸುಳ್ಯದ ಖಾಸಗೀ ಆಸ್ಪತ್ರೆಯೊಂದಕ್ಕೆ ಮೆಷಿನ್ ರಿಪೇರಿಗೆಂದು ತಮಿಳುನಾಡಿನಿಂದ ಆಗಮಿಸಿದ್ದ ವಾನನ್ಸ್, ದೇವರಾಮನ ,ಪ್ರೇಮಕುಮಾರ್ ಜಿ ಹಾಗೂ ಗಾಂಧೀನಗರ ನಿವಾಸಿ ಪ್ರವೀಣ್ ಜಾರ್ಜ್, ಬೆಳ್ಳಾರೆ ನಿವಾಸಿ ಶ್ರುತಿ ಎಂಬವರುಗಳನ್ನು ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಮಿತ್ತ ಕ್ವಾರೆಂಟೈನ್ ಗೆ ಒಳಗಾಗಲು ಅದೇಶಿಸಲಾಗಿತ್ತು. ಆದರೆ ಈ ವ್ಯಕ್ತಿಗಳು ಸರಕಾರ ಅದೇಶಿರುವ ಕೋವಿಡ್-19 ನಿಯಮವನ್ನು ಉಲ್ಲಂಘಿಸಿರುತ್ತಾರೆ ಎಂದು ಆರೋಪಿಸಲಾಗಿದ್ದು. ಸುಳ್ಯ ತಹಶಿಲ್ದಾರರು ನೀಡಿದ ದೂರಿನಂತೆ ಇವರ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗ ಕಾಯ್ದೆ 2020 ಯಂತೆ ಪ್ರಕರಣ ದಾಖಲಾಗಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…